ಗಣೇಶ ಹಬ್ಬದ ಅಂಗವಾಗಿ ಕೊಟ್ಟೂರು ಪಟ್ಟಣದಲ್ಲಿ ಪೊಲೀಸ್ ಪಥ ಸಂಚಲನ

0
754

ಕೊಟ್ಟೂರು: ಗಣೇಶ ಹಬ್ಬದ ಹಿನ್ನಲೆಯಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮೂರ್ತಿಗಳ ವಿಸರ್ಜನೆವರೆಗೂ ಕಟ್ಟೆಚ್ಚರ ಮುಂದುವರಿಯುತ್ತದೆ ಎಂದು ಪಿಎಸ್‌ಐ ಹಾಗೂ ಸಿಪಿಐ ಹೇಳಿದ್ದಾರೆ.

ಪಟ್ಟಣದಲ್ಲಿ ಪಥ ಸಂಚಲನ ನಂತರ ಮಾತನಾಡಿದ ಅವರು ಅದ್ದೂರಿಯಾಗಿ ಈ ವರ್ಷ ವಿಜೃಂಭಣೆಯಿಂದ ನಡೆಯುವದರಿಂದ ಶಾಂತಿ ಸುವ್ಯವಸ್ಥೆಗೆ ಯಾರಿಂದಲೂ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.

ಕಾನೂನು ಉಲ್ಲಂಘನೆ ಮಾಡಿದರೆ ಯಾವುದೇ ಕ್ರಮ ಕೈಗೊಳ್ಳಲೂ ಇಲಾಖೆ ಹಿಂಜರಿಯುವುದಿಲ್ಲವೆಂದು ಎಚ್ಚರಿಸಿದ ಅವರು, ಕಿಡಿಗೇಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡುವ ಸಲುವಾಗಿ ಪ್ರತ್ಯೇಕ ಪೊಲೀಸ್ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗಿದೆ. ಸಾರ್ವಜನಿಕರಲ್ಲಿ ವಿಶ್ವಾಸವನ್ನು ಮೂಡಿಸುವ ಸಲುವಾಗಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಗಿದೆ.

ಪ್ರತ್ಯೇಕ ಪೊಲೀಸ್ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗಿದೆ. ಸಾರ್ವಜನಿಕರಲ್ಲಿ ವಿಶ್ವಾಸವನ್ನು ಮೂಡಿಸುವ ಸಲುವಾಗಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಗಿದೆ ಎಂದರು.

ಇದಕ್ಕೂ ಮೊದಲು ಪಿಎಸ್ಐ ಹಾಗೂ ಸಿಪಿಐ ಠಾಣೆಯಲ್ಲಿ ಯವರ ನೇತೃತ್ವದಲ್ಲಿ ತುರ್ತು ಪಡೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಹಾಗೂ ಕೊಟ್ಟೂರು ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿಯವರುಗಳು ಕೊಟ್ಟೂರು ಪಟ್ಟಣದಲ್ಲಿ ಪಥ ಸಂಚಲನ ನಡೆಸಿದರು.

LEAVE A REPLY

Please enter your comment!
Please enter your name here