ಜಿಲ್ಲೆಯಲ್ಲಿ ಯುವನಿಧಿ ಯೋಜನೆಗೆ ನೊಂದಣಿ ಆರಂಭ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ

0
43

ಧಾರವಾಡ:ಡಿ.26: ಕರ್ನಾಟಕ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಜಿಲ್ಲೆಯಲ್ಲಿ ಇಂದಿನಿಂದ ನೋಂದಾಣಿ ಪ್ರಕ್ರಿಯೆ ಆರಂಭವಾಗಿದೆ. ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು ಅರ್ಹ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾಹಿತಿ ನೀಡಬೆಕೆಂದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಹೇಳಿದರು.

ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಯುವನಿಧಿ ಯೋಜನೆಯ ಬಿತ್ತಿಪತ್ರವನ್ನು ಅನಾವರಣಗೊಳಿಸಿ, ಸಭೆಯ ಅಧ್ಯಕ್ಷೆತೆ ವಹಿಸಿ ಅವರು ಮಾತನಾಡಿದರು.

ಈ ಯೋಜನೆಯಡಿಯಲ್ಲಿ ಪದವೀಧರರರು, ಡಿಪ್ಲೊಮ ತೇರ್ಗಡೆಯಾದವರು 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ, 2023 ತೇರ್ಗಡೆಯಾದ ಮತ್ತು ಫಲಿತಾಂಶ ಪ್ರಕಟಗೊಂಡ 180 ದಿವಸದ ಒಳಗಡೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಅಭ್ಯರ್ಥಿಗಳಿಗೆ ಸೇವಾಸಿಂಧು ಪೋರ್ಟಲ್ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಯುವನಿಧಿ ಯೋಜನೇಯ ನೋಂದಣಿ ಪ್ರಕ್ರಿಯೆಯು ಡಿ.26 ರಿಂದ ಜಿಲ್ಲೆಯಲ್ಲಿ ಆರಂಭವಾಗಿದೆ. ಈ ಯುವನಿಧಿ ಯೋಜನೆಗೆ ನೋಂದಣಿಯಾದ ಪದವೀಧರರಿಗೆ ರೂ. 3.000 ಹಾಗೂ ಡಿಪ್ಲೊಮ ತೇರ್ಗಡೆಯಾದವರಿಗೆ ರೂ. 1.500 ಮಾಸಿಕ ನಿರುದ್ಯೋಗ ಭತ್ಯೆಯನ್ನು ಆಧಾರ ಜೋಡಣೆಯ ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಅಗತ್ಯವಾದ ಎಲ್ಲ ದಾಖಲೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ಮುಂಚಿತವಾಗಿ ತಾತ್ಕಾಲಿಕ ಪದವಿ ಹಾಗೂ ಡಿಪೆÇ್ಲಮಾ ಪ್ರಮಾಣ ಪತ್ರ ಪಡೆದು 180 ದಿನಗಳು ಪೂರ್ಣಗೊಳ್ಳುವ ಮುಂಚೆ ಅರ್ಜಿ ಸಲ್ಲಿಸತಕ್ಕದ್ದು, 180 ದಿನಗಳ ನಂತರ ಸೌಲಭ್ಯವನ್ನು ನೀಡಲಾಗುವುದು. ಅಭ್ಯರ್ಥಿಯು ನಿರುದ್ಯೋಗಿ ಎಂದು ದೃಢೀಕರಿಸಬೇಕು ಮತ್ತು ಘೋಷಣೆಯನ್ನು ಸಲ್ಲಿಸಬೇಕು. ಉದ್ಯೋಗ ದೊರಕಿದ ನಂತರ ಅಭ್ಯರ್ಥಿಯು ತಕ್ಷಣವೇ ಮುಚ್ಚಳಿಕೆ ಪತ್ರ ನೀಡತಕ್ಕದ್ದು ಎಂದು ಅವರು ತಿಳಿಸಿದರು.

ನೋಂದಾಯಿತ ಅಭ್ಯರ್ಥಿ ವಿವರಗಳನ್ನು ಎನ್.ಎ. ಡಿ ಮೂಲಕ ಪರಿಶೀಲಿಸಲಾಗುವುದು. ಪದವಿ ಹಾಗೂ ಡಿಪೆÇ್ಲಮಾದ ಪ್ರಮಾಣ ಪತ್ರಗಳನ್ನು ಮ್ಯಾನುವೆಲ್ ಮೂಲಕ ಅಪೆÇ್ಲೀಡ್ ಮಾಡಿದರೆ, ಅಪ್ ಲೋಡ್ ಮಾಡಿದ ದಾಖಲೆಗಳ ವಿವರಗಳನ್ನು ಆಯಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಿಗೆ ರವಾನಿಸಲಾಗುವುದು, ತಪ್ಪು ಘೋಷಣೆ ಅಥವಾ ಉದ್ಯೋಗ ಪಡೆದಿರುವುದನ್ನು ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುತ್ತದೆ. ಪಾವತಿಸಿದ ಮೊತ್ತವನ್ನು ಕಾನೂನಿನ ಪ್ರಕಾರ ವಸೂಲಿ ಮಾಡಲಾಗುವುದು. ಯುವನಿಧಿ ಯೋಜನೆಯಡಿ ನೋಂದಾಯಿತ ಅಭ್ಯರ್ಥಿಗಳ ದತ್ತಾಂಶವನ್ನು ಪರಿಶೀಲನೆಗಾಗಿ ಕೌಶಲ್ಯ ಸಂಪರ್ಕ ಪೆÇೀರ್ಟಲ್‍ಗೆ ಲಭ್ಯವಿರುವ ದತ್ತಾಂಶದೊಂದಿಗೆ ವರ್ಗಾಯಿಸಲಾಗುವುದು.
ನಿರುದ್ಯೋಗಿಯಾಗಿರುವುದನ್ನು ನಿಗದಿತ ನಮೂನೆಯಲ್ಲಿ ಪ್ರತಿ ತಿಂಗಳ 25 ನೇ ತಾರೀಖು ಅಥವಾ ಅದಕ್ಕಿಂತ ಮೊದಲು ಆಧಾರ್ ಆಧಾರಿತ ಓ.ಟಿ.ಪಿ ಮೂಲಕ ಘೋಷಣೆ ಮಾಡತಕ್ಕದ್ದು.

2023ರಲ್ಲಿ ಪದವಿ, ಡಿಪ್ಲೊಮ ಪಾಸಾದ ಅಭ್ಯರ್ಥಿಗಳು ಸೇವಾಸಿಂಧು ಆನ್‍ಲೈನ್‍ನಲ್ಲಿ ನೋಂದಣಿಯಾಗಿ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

ವೇದಿಕೆಯ ಮೇಲೆ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಡಾ.ಚಂದ್ರಪ್ಪ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಭಾರಿ ಸಹಾಯಕ ನಿರ್ದೇಶಕ ಮಹೇಶ ಅವರು ಉಪಸ್ಥಿತರಿದ್ದರು.

ಸಭೆಯಲ್ಲಿ ಪದವಿ ಹಾಗೂ ಡಿಪ್ಲೊಮಾ ಕಾಲೇಜಿನ ಪ್ರಾಂಶುಪಾಲರು ಮತ್ತು ಜಿಲ್ಲಾ – ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here