ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಸ್ಥೆಯಿಂದ ರಾಷ್ಟ್ರೀಯ ರೈತ ದಿನ ಆಚರಣೆ

0
47

ಬಳ್ಳಾರಿ,ಡಿ.26: ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಸ್ಥೆ(ಐಸಿಎಆರ್)ಯ ಬಳ್ಳಾರಿ ಸಂಶೋಧನಾ ಕೇಂದ್ರ ವತಿಯಿಂದ ಸಂಡೂರು ತಾಲೂಕಿನ ಮತ್ತಜನಹಳ್ಳಿ ಗ್ರಾಮದಲ್ಲಿ ರೈತ ದಿನಾಚರಣೆ ಆಚರಿಸಲಾಯಿತು.
ಭಾರತೀಯ ಮಣ್ಣು ಮತ್ತು ನೀರು ಸಂರಕ್ಷಣೆ ಸಂಸ್ಥೆಯ ಬಳ್ಳಾರಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ.ಬಿ.ಕೆ.ರಾವ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮಣ್ಣಿನ ಆರೋಗ್ಯವನ್ನು ಸುಧಾರಿಸಲು ನೈಸರ್ಗಿಕ ಕೃಷಿ ತಂತ್ರಗಳಂತಹ ಪ್ರಕೃತಿ ಆಧಾರಿತ ಪರಿಹಾರಗಳ ಆಳವಡಿಕೆಯ ಮಹತ್ವದ ಅರಿವು ಮೂಡಿಸಿಕೊಳ್ಳಬೇಕು. ರೈತರು ಕೃಷಿ ಭೂಮಿಯಲ್ಲಿ ಮಣ್ಣು ಮತ್ತು ನೀರಿನ ಸಂರಕ್ಷಣಾ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬುಡಕಟ್ಟು ಉಪ ಯೋಜನೆ ಮತ್ತು ಪರಿಶಿಷ್ಟ ಜಾತಿ ಉಪ ಯೋಜನೆಗಳಲ್ಲಿ ಅನುಷ್ಠಾನಗೊಳಿಸಲಾದ ಮಣ್ಣು ಮತ್ತು ಜಲ ಸಂರಕ್ಷಣೆಯ ತಂತ್ರಗಳನ್ನು ಅಳವಡಿಸಿಕೊಂಡಿದ್ದ ಮತ್ತಜ್ಜನಹಳ್ಳಿ ಮತ್ತು ಚಿಲುಮೆಹಳ್ಳಿ ತಾಂಡ ಗ್ರಾಮದ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ರೈತರಿಗೆ ಸುಧಾರಿತ ಕೃಷಿ ಪದ್ಧತಿಗಳ ಬಗ್ಗೆ ಅರಿವು ಮೂಡಿಸಲಾಯಿತು ಮತ್ತು ಕೃಷಿಯಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ನೀಡುವ ಸಂವಾದ ಸಭೆಯನ್ನು ನಡೆಸಲಾಯಿತು.
ಬುಡಕಟ್ಟು ಉಪ ಯೋಜನೆ ಮತ್ತು ಪರಿಶಿಷ್ಟ ಜಾತಿ ಉಪ ಯೋಜನೆಯಡಿ ನಡೆಯುತ್ತಿರುವ ಚಟುವಟಿಕೆಗಳ ಕುರಿತು ರೈತರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ವಿಜ್ಞಾನಿ ಡಾ.ಬಿ.ಎಸ್.ನಾಯ್ಕ, ಡಾ.ರಮೇಶ ಎಂ.ಎನ್, ಡಾ.ಪ್ರಭಾವತಿ ಎಂ, ಡಾ.ರವಿ ದೂಪದಲ್, ರವಿ.ಕೆ.ಎನ್ ಮತ್ತು ಡಾ.ಅನುಷಾ.ಎಂ.ಎನ್ ಸೇರಿದಂತೆ ರೈತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here