ಅಪರಾಧಗಳ ತಡೆಗೆ ಸಾರ್ವಜನಿಕರು ಪೋಲಿಸರೊಂದಿಗೆ ಕೈಜೋಡಿಸಿ : ಪಿಎಸ್ಐ ಗೀತಾಂಜಲಿ ಸಿಂಧೆ

0
235

ಕೊಟ್ಟೂರು: ಪೋಲಿಸರು ಜನಸ್ನೇಹಿಗಳಾಗಿ ಜನರ ಪ್ರಾಣ,ಆಸ್ತಿ- ಪಾಸ್ತಿಗಳ ರಕ್ಷಣೆಗಾಗಿ ಸದಾ ಶ್ರಮಿಸುತ್ತಿದ್ದು, ಅಪರಾಧಗಳ ತಡೆಗೆ ಪೋಲಿಸರಿಗೆ ಸಹಕರಿಸಬೇಕು ಎಂದು ಕೊಟ್ಟೂರು ಪಿಎಸ್ಐ ಗೀತಾಂಜಲಿ ಸಿಂದೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಅಪರಾಧ ತೆಡ ಮಾಸಾಚರಣೆ ಪ್ರಯುಕ್ತ ಪಟ್ಟಣದ ಶಾಲೆ,ಕಾಲೇಜ್ ಮತ್ತು ಬಸ್ ನಿಲ್ದಾಣ ಹಾಗೂ ಸಂತೆ ಮಾರ್ಕೆಟ್ ಸೇರಿದಂತೆ ಜನ ಸಂದಣಿ ಪ್ರದೇಶಗಳಲ್ಲಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ,ಅಪರಾಧಗಳನ್ನು ತಡೆಗಟ್ಟುವಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಕೋರಿದರು.

ಯುವ ಪೀಳಿಗೆಯು ಮೋಜು ಮಸ್ತಿಗೆ ಬಿದ್ದು, ಕಾನೂನು ಪರಿಪಾಲನೆ ಪಾಲಿಸದೆ, ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳದಿರಲು ಸೂಚಿಸಿದರು ಹಾಗೆ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿರ್ಲಕ್ಷ್ಯ ತಾಳದೆ ಮಕ್ಕಳ ಚಲನವಲನಗಳ ಬಗ್ಗೆ ಜಾಗೃತಿ ವಹಿಸಬೇಕು ಎಂದು ಹೇಳಿದರು.

ಹಾಗೆ ಸಾರ್ವಜನಿಕ ಸ್ಥಳಗಳಲ್ಲಿ ಜೇಬುಗಳ್ಳರ,ಸರಗಳ್ಳರ ಹಾಗೂ ಮೊಬೈಲ್ ಕಳ್ಳರಿರುವುದು ಮತ್ತು ತಮ್ಮನ್ನು ಬೇರೆಡೆ ಸೆಳೆದು ಹಣದ ಬ್ಯಾಗ್ ದೋಚುವಂತದ್ದು , ಎಟಿಎಂ ಕಾರ್ಡ್ ಸೀಕ್ರೆಟ್ ನಂಬರ್ ಪಿನ್ ಕೋಡ್ ಹ್ಯಾಕರ್ ಇದ್ದು ಈ ಬಗ್ಗೆ ಎಚ್ಚರ ವಹಿಸಬೇಕು ಎದುರು.

ಮಹಿಳೆಯರು ಆಭರಣಗಳನ್ನು ಹೊರಗಡೆ ಕಾಣುವಂತೆ ಧರಿಸಿ ವಾಯುವಿಹಾರಕ್ಕೆ ತೆರಳಬೇಡಿ,4-5 ದಿನಗಳು ಊರಿಗೆ ಹೋದರೆ ಮನೆಯಲ್ಲಿನ ಆಭರಣಗಳನ್ನು ಮತ್ತು ಹಣವನ್ನು ಬ್ಯಾಂಕ್ ಲಾಕರ್ ನಲ್ಲಿ ಇಟ್ಟು ಹೋಗತಕ್ಕದ್ದು ಹಾಗೆ ಬೈಕ್ ಗಳನ್ನು ಬಿಟ್ಟು ಹೋಗುವಾಗ ಹ್ಯಾಂಡ್ ಲಾಕ್ ಮಾಡಿ ಹೋಗತಕ್ಕದ್ದು ಎಂದು ಈಗೆ ಸುಮಾರು12 ಜಾಗೃತಿ ಮಾಹಿತಿಗಳನ್ನು ತಿಳಿಸಿದರು.

ಅಪರಾಧ ತಡೆಗಟ್ಟುವಲ್ಲಿ ಸಾರ್ವಜನಿಕರು ಪೋಲಿಸ್ ರೊಂದಿಗೆ ಕೈ ಜೋಡಿಸಿ, ಏನೇ ಅಪರಾಧ ಸಮಸ್ಯೆ ಇದ್ದರು 24×7 ಕಾರ್ಯ ನಿರತವಾಗಿರುವ ಪೋಲಿಸ್ ವಾಹನಕ್ಕೆ 112 ಗೆ ಕರೆ ಮಾಡಿ ರಕ್ಷಣೆ ಪಡೆದುಕೊಳ್ಳಿ ಹಾಗೆ ಅಪರಾಧ ತಡೆಯಿರಿ ಎಂದು ಹೇಳಿದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here