ಕೊಟ್ಟೂರು: ದೇಶದಾದ್ಯಂತ ಡ್ರಗ್ಸ್ ಮಧ್ಯಪಾನ, ಧೂಮಪಾನ ಮುಂತಾದ ಮಾದಕ ವ್ಯಸನಗಳಿಂದ ಮುಕ್ತವಾದ ಸ್ವಚ್ಛ ವ್ಯಕ್ತಿತ್ವ, ಸ್ವಚ್ಛ ಕ್ಯಾಂಪಸ್ಗಳ ಮೂಲಕ ಸ್ವಚ್ಛ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿ ಯುವ ಜನಾಂಗದ ಪಾತ್ರ ನಿರ್ಣಾಯಕವಾದುದು. ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ. ಮಾದಕ ವಸ್ತುಗಳ ಸೇವನೆ ವ್ಯಕ್ತಿಯ ಮೆದುಳಿನಲ್ಲಿ ಬದಲಾವಣೆ ತಂದು ಅಪರಾಧಿ ಕೃತ್ಯಗಳಿಗೆ ಪ್ರಚೋದನೆ ನೀಡುತ್ತದೆ ಎಂದು ಕೊಟ್ಟೂರು ಠಾಣೆಯ ಸಿಪಿಐ ಹೇಳಿದರು.
ಈ ಸಂದರ್ಭದಲ್ಲಿ ಕೊಟ್ಟೂರು ಠಾಣೆಯ ಸಿಪಿಐ, ಹಾಗೂ ಪಿಎಸ್ಐ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇತರರು ಇದ್ದರು.
ವರದಿ: ಶಿವರಾಜ್ ಕನ್ನಡಿಗ