ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ: ದಿನ ಬದಲಾವಣೆ

0
368

ಬಳ್ಳಾರಿ,ಜ.08: ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದಿಂದ ಜಿಲ್ಲೆಯಲ್ಲಿ ಸಂಡೂರು ಮತ್ತು ಕಂಪ್ಲಿ ತಾಲೂಕು ಕೇಂದ್ರಗಳಲ್ಲಿ ಜ.09, 10 ರಂದು ನಡೆಯಬೇಕಿದ್ದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆಯನ್ನು ಜ.17 ಮತ್ತು 18 ರಂದು ನಡೆಸಲಾಗುತ್ತದೆ ಎಂದು ಬಳ್ಳಾರಿ ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿದ್ಧರಾಜು.ಸಿ ಅವರು ತಿಳಿಸಿದ್ದಾರೆ.

ಜ.17 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ,

ಜ.18 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಿರುಗುಪ್ಪ ಸಿಡಿಪಿಓ ಕಚೇರಿ ಸಭಾಂಗಣದಲ್ಲಿ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ನಡೆಯಲಿದೆ.

ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿತ ದಿನ ಮತ್ತು ಸ್ಥಳದಲ್ಲಿ ತಮ್ಮ ದೂರು ಅರ್ಜಿಗಳನ್ನು ನೀಡಬಹುದು. ಕುಂದುಕೊರತೆಗಳ ಅಹವಾಲುಗಳ ಅರ್ಜಿಗಳನ್ನು ಸ್ವೀಕರಿಸಿ, ವಿಚಾರಿಸಲಾಗುತ್ತದೆ. ಕರ್ನಾಟಕ ಲೋಕಾಯುಕ್ತ ಬೆಂಗಳೂರು ವಿಭಾಗ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:01 ಮತ್ತು 02 ಗಳನ್ನು ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here