ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ 32ನೇ ಘಟಿಕೋತ್ಸವದಲ್ಲಿ ಇಂದಿರಾ ಇವರಿಗೆ ಉನ್ನತ ಶಿಕ್ಷಣ ಸಚಿವರು ಮತ್ತು ಕುಲಪತಿಗಳಿಂದ ಡಾಕ್ಟರೇಟ್ ಪದವಿ ನೀಡಲಾಯಿತು.
ಇವರು ಸಿರುಗುಪ್ಪ ತಾಲೂಕಿನ ಗುಂಡಿಗನೂರು ಗ್ರಾಮದ ಪತ್ರಕರ್ತರು ಹಾಗೂ ಆರ್ ಟಿ ಐ ಕಾರ್ಯಕರ್ತರಾದ ವೆಂಕಟೇಶ್ ಇವರ ಪತ್ನಿ ಇಂದ್ರವ್ವ ಎನ್ ಬುಡ್ಡಾಳವರ ಇವರು ಬುಡಕಟ್ಟು ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಕೆ ಎಂ ಮೇತ್ರಿ ಅವರ ಮಾರ್ಗದರ್ಶನದಲ್ಲಿ
“ಮೈಲಾರಲಿಂಗ ಪರಂಪರೆ ಮತ್ತು ಕಂಚಾವೀರರು” ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂದಕ್ಕೆ ಡಾಕ್ಟರೇಟ್ ಪದವಿಯನ್ನು ನೀಡಿ ಗೌರವಿಸಲಾಯಿತು.