ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ವಿಜಯನಗರ ಜಿಲ್ಲೆಗೆ ಅನ್ಯಾಯವಾಗಿದೆ.
ಈ ಬಾರಿಯ ಬಜೆಟ್ ನಲ್ಲಿ ರಾಜ್ಯ ಸರಕಾರ ಒಂದೇ ಒಂದು ಅನುದಾನ ಘೋಷಣೆ ಮಾಡದ ಕಾರಣ ಜಿಲ್ಲೆಯ ನಿವಾಸಿಗಳು ನಿರಾಸೆಗೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ವಿಜಯನಗರಕ್ಕೆ ಟಾಂಗ್ ನೀಡಿದ್ದಾರೆ.
ಸಕ್ಕರೆ ಕಾರ್ಖಾನೆ ನಿರ್ಮಾಣ ರೈತರ ಬಹುದಿನಗಳ ಬೇಡಿಕೆಯಾಗಿದ್ದು, ಈ ಬಾರಿಯ ಬಜೆಟ್ನಲ್ಲಿಯೂ ಸಕ್ಕರೆ ಕಾರ್ಖಾನೆ ನಿರ್ಮಾಣ ಕಹಿಯಾಗಿಯೇ ಉಳಿದಿದೆ.
ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರಕ್ಕೆ ಬಂದಾಗ ಸಕ್ಕರೆ ಕಾರ್ಖಾನೆ ಸ್ಥಾಪಿಸುವುದಾಗಿ ಭರವಸೆ ನೀಡಿದ್ದರು
ಹಂಪಿಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲು ಬಜೆಟ್ ನಲ್ಲಿ ಒಂದೇ ಒಂದು ಘೋಷಣೆಯಾಗಿಲ್ಲ, ಈ ಭಾಗದ ಜನರು ಕೂಡ ಹೆಲಿ ಟೂರಿಸಂಗೆ ಆದ್ಯತೆ ನೀಡಲಿ ಎಂದು ಹಾರೈಸಿದರು
ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಮಸ್ಯೆಗಳಿಗೆ ಬಜೆಟ್ ಸ್ಪಂದಿಸಿದೆಯೇ? ಅದೂ ಅಲ್ಲ. ಒಟ್ಟಿನಲ್ಲಿ ಹೊಸ ವಿಜಯನಗರ ಜಿಲ್ಲೆಗೆ ಈ ಬಾರಿಯ ಬಜೆಟ್ ನಲ್ಲಿ ಭಾರಿ ಅನ್ಯಾಯವಾಗಿದೆ ಎನ್ನಬಹುದು.