“ಮತದಾನ ಮಾಡಿದವನೇ ಮಹಾಶೂರ “

0
29

ಇಂದು ದಿನಾಂಕ 05 05 2024 ರಂದು ಭಾನುವಾರ ತಾಲೂಕು ಆಡಳಿತ ಹಾಗೂ ಸಂಡೂರು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಜಾಗೃತಿ ಮತದಾನ ಜಾಗೃತಿ ಜಾತ ಕಾರ್ಯಕ್ರಮದ ಅಂಗವಾಗಿ ಮ್ಯಾರಥಾನ್ ಓಟ ಹಾಗೂ ಭಾನುವಾರದ ಸಂತೆಯ ದಿವಸ ಎಲ್ಲಾ ಸಾರ್ವಜನಿಕರಿಗೆ ಹಾಗೂ ವ್ಯಾಪಾರಸ್ಥರಿಗೆ ಮತದಾನ ಜಾಗೃತಿ ಅಭಿಯಾನವನ್ನು ಕರಪತ್ರ ಹಂಚುವ ಮೂಲಕ ಹಮ್ಮಿಕೊಳ್ಳಲಾಯಿತು. ಸದರಿ ಮ್ಯಾರಥಾನ್ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಮಾನ್ಯ ಸಹಾಯಕ ಚುನಾವಣಾ ಅಧಿಕಾರಿಗಳಾದ ಸತೀಶ್ ರವರು ಉದ್ಘಾಟಿಸಿದರು.

ಮ್ಯಾರಥಾನ್ ಓಟ ತಾಲೂಕು ಪಂಚಾಯತಿಯಿಂದ ಪ್ರಾರಂಭವಾಗಿ ವಿಜಯ ಸರ್ಕಲ್, ಪುರಸಭೆ ಬಸ್ ನಿಲ್ದಾಣ, ಉಡುಸಲಮ್ಮದೇವಿಯ ದೇವಸ್ಥಾನದ ಮಾರ್ಗವಾಗಿ ಎಪಿಎಂಸಿ ಮಾರ್ಕೆಟ್ ನಲ್ಲಿ ಅಂತ್ಯಗೊಂಡಿತು. ನಂತರ ಎಪಿಎಂಸಿ ಮಾರ್ಕೆಟ್ ನಲ್ಲಿ ಭಾನುವಾರ ಸಂತೆಯ ದಿನವಾದುದರಿಂದ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಜನಸಂದಣಿ ಇದ್ದ ಪ್ರಯುಕ್ತ ಸಾರ್ವಜನಿಕರಲ್ಲಿ ಹಾಗೂ ಮಳಿಗೆಯ ವ್ಯಾಪಾರಸ್ಥರಲ್ಲಿ ಮತದಾನ ಜಾಗೃತಿಯನ್ನು ಕರಪತ್ರವನ್ನ ಪ್ರತಿಯೊಬ್ಬರಿಗೂ ಹಂಚುವ ಮೂಲಕ ಜಾಗೃತಿಯನ್ನು ಮೂಡಿಸಲಾಯಿತು. ನಂತರ ತಾಲೂಕು ಪಂಚಾಯತಿಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಜಾಗೃತಿ ಅಭಿಯಾನ ಅಂತ್ಯಗೊಂಡಿತು.

ಈ ಸಂಧರ್ಭದಲ್ಲಿ ತಾಲೂಕು ಸ್ವಿಫ್ ಸಮಿತಿ ಅಧ್ಯಕ್ಷರಾದ ಹೆಚ್. ಷಡಕ್ಷರಯ್ಯ, ತಹಶೀಲ್ದಾರರಾದ ಅನಿಲ್ ಕುಮಾರ್, ಪುರಸಭೆ ಮುಖ್ಯ ಅಧಿಕಾರಿಗಳಾದ ಜಯಣ್ಣ, ನಂದಿಹಳ್ಳಿ ಪಿಜಿ ಸೆಂಟರ್ ನ ವಿದ್ಯಾರ್ಥಿಗಳು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು, ಪುರಸಭೆ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here