Sunday, October 26, 2025
HomeKotturuಒಂದು ಸರ್ಕಾರ ನಡೆಸುವ ಕಾರ್ಯಕ್ರಮಗಳನ್ನು ಧರ್ಮಸ್ಥಳ ಸಂಸ್ಥೆ ನಡೆಸುತ್ತಿದೆ ಶಾಸಕ ನೇಮಿರಾಜ್ ನಾಯಕ್

ಒಂದು ಸರ್ಕಾರ ನಡೆಸುವ ಕಾರ್ಯಕ್ರಮಗಳನ್ನು ಧರ್ಮಸ್ಥಳ ಸಂಸ್ಥೆ ನಡೆಸುತ್ತಿದೆ ಶಾಸಕ ನೇಮಿರಾಜ್ ನಾಯಕ್

ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು :ಪಟ್ಟಣದ ಚಾನುಕೋಟಿ ಮಠದ ಸಭಾಂಗಣದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು ಧರ್ಮಸ್ಥಳ ಕೇವಲ ಯಾತ್ರಾ ಕ್ಷೇತ್ರವಾಗದೆ ಸರ್ವರನ್ನು ಸಮನಾಗಿ ಕಾಣುವ ಧರ್ಮ ಕ್ಷೇತ್ರವಾಗಿ ಬೆಳೆದು ನಿಂತಿದೆ ಸಹಿಸಲಾಗದ ಕೆಲವು ಕುತಂತ್ರಗಳು ಮಾಡುವ ಷಡ್ಯಂತರಗಳಿಗೆ ಕಿವಿ ಕೊಡದೆ ಸಮಾಜದ ಎಲ್ಲ ಮಹಿಳೆಯರು ಸತ್ಯವನ್ನು ಅರಿತುಕೊಂಡು ಸ್ವಾವಲಂಬಿಯಾಗಿ ಜೀವನ ನಡೆಸುವುದಕ್ಕೆ ದಾರಿ ದೀಪವಾದ ಶ್ರೀ ಕ್ಷೇತ್ರದ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಉಪಯೋಗಗಳನ್ನು ಪಡೆದುಕೊಳ್ಳಬೇಕೆಂದು ಕಿವಿಮಾತು ಹಗರಿಬೊಮ್ಮನಹಳ್ಳಿ ಶಾಸಕ ಕೆ ನೇಮಿರಾಜ ನಾಯ್ಕ ಹೇಳಿದರು.

ಇದೇ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಶ್ರೀ ಡಾ. ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿಗಳು ಇಂತಹ ಮಹಿಳಾ ವಿಚಾರಗೋಷ್ಠಿಗಳು ಮಹಿಳಾ ಸಮಾರಂಭಗಳು ನಡೆಯುವುದರಿಂದ ಮಹಿಳೆಯರಲ್ಲಿ ಆತ್ಮಸ್ಥೈರ್ಯ ಹೆಚ್ಚಿ ಕೌಟುಂಬಿಕ ಜೀವನದಲ್ಲಿ ಅನ್ಯೋನ್ಯತೆ ಮತ್ತು ಸ್ವಾವಲಂಬಿ ಜೀವನ ನಡೆಸಲು ಅನುಕೂಲಕರವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿನ ಮಾಜಿ ಸದಸ್ಯರಾದ ಎಂ ಎಂ ಜೆ ಹರ್ಷವರ್ಧನ್ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿ ಮಾತನಾಡಿ ಯೋಚನೆಯ ಸಂಪೂರ್ಣ ವಿವರಗಳನ್ನು ಹಾಗೂ ಯೋಜನೆಯ ಕಾರ್ಯವೈಕರಿಗಳನ್ನ ವಿಶ್ಲೇಷಿಸಿ ಪ್ರಾಸ್ತಾವಿಕ ನುಡಿಗಳ ನಾಡಿದರು.

ಪಟ್ಟಣ ಪಂಚಾಯಿತಿಯ ಸದಸ್ಯರಾದ ಶ್ರೀಮತಿ ಕೆ ಎಸ್ ವೀಣಾ ವಿವೇಕಾನಂದ ಗೌಡ ದಾವಣಗೆರೆಯ ನಾರಾಯಣ ಹೃದಯಾಲಯದ ಶ್ರೀ ಡೇವಿಡ್ ಹೃದಯ ಸಂಬAಧಿ ಕಾಯಿಲೆಗಳ ಬಗ್ಗೆ ಹಾಗೂ ಅವುಗಳ ಸುರಕ್ಷತೆಯ ಬಗ್ಗೆ ಉಪನ್ಯಾಸ ನೀಡಿದರು ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯರಾದ ಕೊಟ್ಟೂರಿನ ಮಲ್ಲಿಕಾರ್ಜುನ್ ಮಠದ್ ಶ್ರೀಮತಿ ನೇತ್ರಾವತಿ ಮಲ್ಲಿಕಾರ್ಜುನ್ ಎಂ ಉಜ್ಜಯಿನಿ ಇನ್ನಿತರರು ಹಾಜರಿದ್ದರು ಯೋಜನೆಯ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀಯುತ ನವೀನ್ ಕುಮಾರ್ ಎಚ್ ಡಿ ಸರ್ವರನ್ನು ಸ್ವಾಗತಿಸಿ ಅಭಿನಂದಿಸಿದರು ಇದೇ ಸಂದರ್ಭದಲ್ಲಿ ವಿಶೇಷವಾಗಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಪುಷ್ಪಗುಚ್ಛ ಸ್ಪರ್ಧೆ ಇನ್ನಿತರೆ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments