ವರದಿ : ಬಾಬು ವೈ ಎಂ
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕೂಡ್ಲಿಗಿ ಪಟ್ಟಣದ ಕೆರೆ ಕಾವಲಿಹಟ್ಟಿ ಗ್ರಾಮದಲ್ಲಿ ಶ್ರೀಮತಿ ಲಕ್ಷ್ಮೀ (30), ಗಂಡ ಮಾರೇಶ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಿಧನರಾದರು.
ಈ ದುಃಖದ ಸುದ್ದಿ ತಿಳಿದ ಕೂಡಲೇ ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ. ಅವರು ಸ್ಥಳೀಯ ಮುಖಂಡರೊಂದಿಗೆ ಮೃತರ ನಿವಾಸಕ್ಕೆ ಭೇಟಿ ನೀಡಿ, ದುಃಖದಲ್ಲಿರುವ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಮೃತಳಿಗೆ ದರ್ಶನ ಪಡೆದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ ಶಾಸಕರು, ಅವರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬಕ್ಕೆ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಾಸಕರು, “ಈ ದುಃಖದ ಸಂದರ್ಭದಲ್ಲಿ ನಾವು ನಿಮ್ಮ ಕುಟುಂಬದ ಜೊತೆ ಇದ್ದೇವೆ. ಯಾವುದೇ ಸಹಾಯ ಬೇಕಾದರೂ ಸರ್ಕಾರ ಹಾಗೂ ನನ್ನ ಮಟ್ಟದಲ್ಲಿ ನೆರವು ನೀಡಲಾಗುವುದು” ಎಂದು ಭರವಸೆ ನೀಡಿದರು. ಅಲ್ಲದೆ, ಪೂಜಾ ವಿಧಿ ವಿಧಾನಗಳಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದರು.
ಈ ಸಂದರ್ಭದಲ್ಲಿ ಮೃತಳ ಕುಟುಂಬದ ಸದಸ್ಯರು, ಸ್ಥಳೀಯ ಮುಖಂಡರು, ಊರಿನ ಪ್ರಮುಖರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಮೃತಳ ಅಗಲಿಕೆಗೆ ಸಂತಾಪ ಸೂಚಿಸಿದರು.
