The post ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ಡಿಸೆಂಬರ್ 10 ರಂದು ಮತದಾನ; ಡಾ||ಆರ್.ಸೆಲ್ವಮಣಿ appeared first on Hai Sandur kannada fortnightly news paper.
]]>The post ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆಗೆ ಡಿಸೆಂಬರ್ 10 ರಂದು ಮತದಾನ; ಡಾ||ಆರ್.ಸೆಲ್ವಮಣಿ appeared first on Hai Sandur kannada fortnightly news paper.
]]>The post ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ -ಎಂ.ಪಿ.ಕುಮಾರಸ್ವಾಮಿ appeared first on Hai Sandur kannada fortnightly news paper.
]]>ಇಂದು ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನುಸೂಚಿತ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಬ್ಯಾಂಕ್ಗಳು ಪಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡುವಲ್ಲಿ ವಿಳಂಬ ನೀತಿಯನ್ನು ಅನುಸರಿಸಬಾರದು. ಪರಿಶಿಷ್ಡ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಕಡಿಮೆಯಾಗಬೇಕು ಹಾಗೂ ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರೆಯಬೇಕು. ವಿದವಾ ಪುರ್ನವಿವಾಹ ಗಾಂಧಿಜೀಯವರ ಕಲ್ಪನೆಯಾಗಿದ್ದು ವಿದವಾ ಪುರ್ನವಿವಾಹಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಅವರು ತಿಳಿಸಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ದೊರೆಯುವ ಸರ್ಕಾರದ ಯೋಜನೆ, ಸೌಲಭ್ಯಗಳಲ್ಲಿ ಯಾವುದೇ ರೀತಿಯ ಆಕ್ರಮಗಳು ನಡೆಯಬಾರದು. 94ಸಿ ಅಡಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ಶಿಘ್ರವಾಗಿ ಇತ್ಯರ್ಥ ಪಡಿಸಿ. ಜನರಿಗೆ ಪುನರ್ ವಸತಿ ಸೌಲಭ್ಯಗಳನ್ನು ಕಲ್ಪಿಸಬೇಕು ಹಾಗೂ ಜಿಲ್ಲೆಯಲ್ಲಿ ಸ್ಲಂಗಳು ಇಲ್ಲದಂತೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ಅನುಸೂಚಿತ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿಯ ಸದಸ್ಯರಾದ ಹೆಚ್.ಕೆ.ಕುಮಾರಸ್ವಾಮಿ ಅವರು ಮಾತನಾಡಿ, ಜಿಲ್ಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರವಾಗಿದೆ. ಜಿಲ್ಲೆಯಲ್ಲಿ ಎಸ್.ಸಿ ಮತ್ತು ಎಸ್.ಟಿ ಜನಾಂಗದ ಜನರು ಹೆಚ್ಚಾಗಿದ್ದಾರೆ. ಅಂರ್ತಜಾತಿ ವಿವಾಹವಾದ ಪ್ರತಿಯೊಬ್ಬರಿಗೂ ಪ್ರೋತ್ಸಾಹಧನ ಸಕಾಲದಲ್ಲಿ ವಿತರಿಸಿ. ಜಿಲ್ಲೆಯಲ್ಲಿ ನೀರು 1000 ದಿಂದ 1200 ಅಡಿಗೆ ದೊರೆಯುತ್ತಿದೆ, ಗಂಗಾ ಕಲ್ಯಾಣ ಯೋಜನೆಯಾಡಿ ನೀಡುವ ಅನುದಾನವನ್ನು ಹೆಚ್ಚಳ ಮಾಡಬೇಕು ಎಂದು ಅವರು ತಿಳಿಸಿದರು.
ಅನುಸೂಚಿತ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿಯ ಸದಸ್ಯರಾದ ಹೆಚ್.ಎಂ.ರಮೇಶ್ಗೌಡ ಅವರು ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಪ್ರತ್ಯೇಕ ಸ್ಮಶಾನ ಭೂಮಿ ನೀಡಲು ಅವಕಾಶವಿದ್ದು ಎಲ್ಲಾ ಗ್ರಾಮಗಳಲ್ಲಿ ಸ್ಮಶಾನಗಳಿಗೆ ಭೂಮಿಯನ್ನು ತಹಶೀಲ್ದಾರ್ ಅವರು ಗುರ್ತಿಸಿ ನೀಡಿ. 94ಸಿ ಅಡಿಯಲ್ಲಿ ಎಲ್ಲಾ ಬಡವರು ಅರ್ಜಿ ಸಲ್ಲಿಸಿರುತ್ತಾರೆ. ಯಾರು ಕಡು ಬಡವರಿರುತ್ತಾರೆ ಅವರನ್ನು ಗುರುತಿಸಿ ಸೌಲಭ್ಯಗಳನ್ನು ನೀಡಿ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಡಾ||ಆರ್.ಸೆಲ್ವಮಣಿ ಅವರು ಜಿಲ್ಲೆಗೆ ಎಸ್.ಸಿ.ಪಿ ಟಿ.ಎಸ್.ಪಿ ಅಡಿ ಬಿಡುಗಡೆಯಾಗಿರುವ ಅನುದಾನದಲ್ಲಿ ಶೇಕಡ 95 ರಷ್ಟು ಅನುದಾನವನ್ನು ಬಳಕೆ ಮಾಡಲಾಗಿದೆ. ದೌರ್ಜನ್ಯ ಪ್ರಕರಣಗಳಲ್ಲಿ ದೌರ್ಜನ್ಯಕ್ಕೆ ಒಳಗಾದವರಿಗೆ ಪರಿಹಾರ ನೀಡಲಾಗಿದೆ. 2020-21 ನೇ ಸಾಲಿನಲ್ಲಿ 64 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಸ್ಮಶಾನ ಭೂಮಿಯನ್ನು ನೀಡಲಾಗಿದೆ. ಕೋಲಾರ ಜಿಲ್ಲೆಯು 2019 ರಲ್ಲಿ ಬಯಲು ಬರ್ಹಿದೇಸೆ ಮುಕ್ತ ಜಿಲ್ಲೆಯಾಗಿದೆ. 156 ಗ್ರಾಮ ಪಂಚಾಯಿತಿಗಳಿಗೆ ಘನ ತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪಿಸಲು ಭೂಮಿಯನ್ನು ಮಂಜೂರು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡದ ಕಲ್ಯಾಣ ಸಮಿತಿಯ ಸದಸ್ಯರಾದ ಅವಿನಾಶ್ ಉಮೇಶ್ ಜಾವೇದ್, ಸಂಜೀವ ಮಠಂದೂರು, ಬಿ.ಹರ್ಷವರ್ಧನ್, ತಳವಾರ್ ಶಿವಣ್ಣ, ಅದೀನ ಕಾರ್ಯದರ್ಶಿಗಳಾದ ಪ್ರಶಾಂತ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಉಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡೆಕ್ಕಾ ಕಿಶೋರ್ ಬಾಬು ಅವರು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶಿಲ್ದಾರರು ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.
The post ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ -ಎಂ.ಪಿ.ಕುಮಾರಸ್ವಾಮಿ appeared first on Hai Sandur kannada fortnightly news paper.
]]>The post ಮಕ್ಕಳ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ – ಡಾ.ಆರ್. ಜಿ. ಆನಂದ್. appeared first on Hai Sandur kannada fortnightly news paper.
]]>ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 94 ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಿದ್ದು 91 ಪ್ರಕರಣಗಳನ್ನು ತಡೆಯಲಾಗಿದೆ, 3 ಪ್ರಕರಣಗಳಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರಾದ ಎಂ.ಜಿ.ಪಾಲಿ ಅವರು ಸಭೆಗೆ ಮಾಹಿತಿ ನೀಡಿದರು.
ರಾಜ್ಯ ಸರ್ಕಾರ ಮಕ್ಕಳಿಗೆ ಕೋವಿಡ್ ಹರಡದಂತೆ ತಡೆಗಟ್ಟುವಲ್ಲಿ ಸಫಲವಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಉತ್ತಮ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 6 ಲಕ್ಷ ಮಕ್ಕಳಿದ್ದು 3 ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಕೋವಿಡ್ ಸೋಂಕು ಹರಡದಂತೆ ಜಿಲ್ಲಾಡಳಿತ ಕ್ರಮ ವಹಿಸಿದೆ. ಅಗತ್ಯ ಚಿಕಿತ್ಸೆ ಮತ್ತು ಬೆಡ್ ಗಳನ್ನು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಸಂವೇದನಾ ಸಹಾಯವಾಣಿ ಸಂಖ್ಯೆ 18001212830 ಯನ್ನು ರಾಷ್ಟ್ರದ್ಯಂತ ಪ್ರಾದೇಶಿಕ ಬಾಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಮಕ್ಕಳು ಕೋವಿಡ್ಗೆ ತುತ್ತಾದರೆ ಅಥವಾ ಸಮಸ್ಯೆಗಳಿದ್ದರೆ ಪೋಷಕರು ಹಾಗು ಮಕ್ಕಳು ಸಹಾಯವಾಣಿಗೆ ಕರೆ ಮಾಡಿ ಸಲಹೆ ಪಡೆಯಬಹುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕೋಲಾರ ಪೊಲೀಸ್ ವರಿಷ್ಠಾಧಿಕಾರಿಗಳಾದ. ಡೆಕ್ಕಾ ಕಿಶೋರ್ ಬಾಬು, ಕೆ. ಜಿ. ಎಫ್.ಪೊಲೀಸ್ ವರಿಷ್ಠಾಧಿಕಾರಿಗಳಾದ ಇಲಕ್ಕಿಯಾ ಕರುಣಾಕರನ್, ಶಿಕ್ಷಣ ಇಲಾಖೆಯ ಉಪನಿರ್ದೇಕರಾದ ಕೃಷ್ಣಮೂರ್ತಿ, ತಹಶೀಲ್ದಾರ್ ಶೋಭಿತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
The post ಮಕ್ಕಳ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ – ಡಾ.ಆರ್. ಜಿ. ಆನಂದ್. appeared first on Hai Sandur kannada fortnightly news paper.
]]>The post ಗಡಿ ಭಾಗದ ಕನ್ನಡಿಗರನ್ನು ಶೈಕ್ಷಣಿಕವಾಗಿ ಮತ್ತು ಸಾoಸ್ಕೃತಿಕವಾಗಿ ಅಭಿವೃದ್ಧಿ ಪಡಿಸಲಾಗುವುದು – ಡಾ.ಸಿ.ಸೋಮಶೇಖರ್ appeared first on Hai Sandur kannada fortnightly news paper.
]]>The post ಗಡಿ ಭಾಗದ ಕನ್ನಡಿಗರನ್ನು ಶೈಕ್ಷಣಿಕವಾಗಿ ಮತ್ತು ಸಾoಸ್ಕೃತಿಕವಾಗಿ ಅಭಿವೃದ್ಧಿ ಪಡಿಸಲಾಗುವುದು – ಡಾ.ಸಿ.ಸೋಮಶೇಖರ್ appeared first on Hai Sandur kannada fortnightly news paper.
]]>The post ಪಾಶ್ಚಾತ್ಯ ಸಂಸೃತಿಯ ಅಳವಡಿಕೆ ಮಾದಕ ವಸ್ತುಗಳ ಸೇವನೆಗೆ ಕಾರಣ; ಡಾ|| ಜಗದೀಶ್ appeared first on Hai Sandur kannada fortnightly news paper.
]]>The post ಪಾಶ್ಚಾತ್ಯ ಸಂಸೃತಿಯ ಅಳವಡಿಕೆ ಮಾದಕ ವಸ್ತುಗಳ ಸೇವನೆಗೆ ಕಾರಣ; ಡಾ|| ಜಗದೀಶ್ appeared first on Hai Sandur kannada fortnightly news paper.
]]>The post ಅಂತರ್ಜಲವನ್ನು ವೃದ್ಧಿಸಿ, ಸಂರಕ್ಷಿಸಲು ಅಟಲ್ ಭೂಜಲ ಯೋಜನೆ ಜಾರಿ –ಜೆ.ಸಿ.ಮಾಧುಸ್ವಾಮಿ appeared first on Hai Sandur kannada fortnightly news paper.
]]>ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ, ಎಸ್.ಪಿ.ಎಮ್.ಯು. ಅಟಲ್ ಭೂಜಲ ಯೋಜನೆ ಬೆಂಗಳೂರು ಹಾಗೂ ಜಿಲ್ಲಾ ಪಂಚಾಯತ್ ಕೋಲಾರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸುಸ್ಥಿರ ಅಂತರ್ಜಲ ನಿರ್ವಹಣೆಗಾಗಿ ಅಟಲ್ ಭೂಜಲ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆಲವು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟವು 1000 ದಿಂದ 1200 ಅಡಿಗಳಿಗೆ ಇಳಿದಿದೆ. ಕೋಲಾರ ಜಿಲ್ಲೆಯಲ್ಲಿಯೂ ಇದೇ ಪರಿಸ್ಥಿತಿ ಇದೆ. ಅಂತರ್ಜಲವನ್ನು 200 ರಿಂದ 300 ಅಡಿಗೆ ತರುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಅಂತರ್ಜಲವನ್ನು ಹೆಚ್ಚಿಸಲು ಯಾವ ಕಾಮಗಾರಿಗಳನ್ನು ಮಾಡಬೇಕು ಎಂಬುದನ್ನು ಗ್ರಾಮ ಸಭೆಗಳ ಮೂಲಕ ಆಯ್ಕೆ ಮಾಡಲಾಗುವುದು. ಯೋಜನೆಯನ್ನು 3 ಹಂತಗಳಲ್ಲಿ ಅನುಷ್ಠಾನ ಮಾಡಲಾಗುವುದು. ಮೊದಲ ಹಂತದಲ್ಲಿ ನೀರಿನ ಲಭ್ಯತೆಯ ಬಗ್ಗೆ ಅಧ್ಯಯನ ನಡೆಸಿ ಅವಶ್ಯಕತೆಗೆ ಅನುಗುಣವಾಗಿ ಒಳಸುವಂತೆ ಮಾಡುವುದು. ಎರಡನೇ ಹಂತದಲ್ಲಿ ಕೃಷಿ ಹೊಂಡ, ಚೆಕ್ ಡ್ಯಾಂ, ಕುಂಟೆಗಳು, ನಿರ್ಮಾಣ ಮಾಡಿ ಸಂರಕ್ಷಣೆ ಮಾಡುವುದು. ನೀರಿನ ಆವಿ ಪ್ರಮಾಣ ತಗ್ಗಿಸುವುದು ಹಾಗೂ ವಾತಾವರಣದಲ್ಲಿ ತೇವಾಂಶವನ್ನು ಕಾಪಾಡುವುದು. ಮೂರನೆಯದಾಗಿ ತೋಟಗಾರಿಕೆ ಬೆಳೆಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ನೀರಿನ ಬಳಕೆ ಕಡಿಮೆ ಮಾಡಬಹುದಾಗಿದೆ ಎಂದರು.
ಹನಿ ನೀರಾವರಿ ಪದ್ದತಿಗಳ ಅಳವಡಿಕೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು. ಎತ್ತಿನ ಹೊಳೆ ಯೋಜನೆಯ ಮೂಲಕ 24 ಟಿ.ಎಂ.ಸಿ ನೀರನ್ನು ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಒದಗಿಸಲಾಗುವುದು. ಕೃಷ್ಣ ಜಲಾನಯನ ಪ್ರದೇಶಕ್ಕೆ ಹರಿಯುವ ವ್ಯರ್ಥ ನೀರನ್ನು ತಡೆದು ಇಂಗುವಂತೆ ಮಾಡುವ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್. ಮುನಿಸ್ವಾಮಿ ರವರು ಮಾತನಾಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ನೀರಿಗಾಗಿ ತುಂಬಾ ಕಷ್ಟ ಪಡುತ್ತಿದ್ದಾರೆ. ಕೆಲವು ಕಡೆ ಕೆ. ಸಿ. ವ್ಯಾಲಿ ನೀರು ಹರಿಸಿರುವುದರಿಂದ ಸ್ವಲ್ಪ ಮಟ್ಟಿಗೆ ಅಂರ್ತಜಲ ವೃದ್ಧಿಸಿದೆ. ಕೆರೆ ಕುಂಟೆ ಕಾಲುವೆಗಳನ್ನು ಸಂರಕ್ಷಿಸಿಬೇಕು. ಚೆಕ್ ಡ್ಯಾಮ್ ನಿರ್ಮಿಸಿ ನೀರು ಹರಿಯದಂತೆ ತಡೆದು ಅಂತರ್ಜಲ ವೃದ್ಧಿಸಬೇಕು. ರೈತರಿಗೆ ಅನುಕೂಲವಾಗುವಂತೆ ಅವರ ಆದಾಯ ದ್ವಿಗುಣಗೊಳಿಸುವ ಕಾರ್ಯ ಎಲ್ಲರೂ ಒಟ್ಟಾಗಿ ಮಾಡಬೇಕು. ಕೃಷಿಯಲ್ಲಿ ಕೋಲಾರ ಜಿಲ್ಲೆ ಇಸ್ರೇಲ್ಗೆ ಮಾದರಿಯಾಗುವಂತೆ ಕಾರ್ಯ ಮಾಡಬೇಕು ಎಂದು ತಿಳಿಸಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಹರಿಸುವ ಎತ್ತಿನ ಹೊಳೆ ಯೋಜನೆಯ ಎಲ್ಲಾ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಆರ್. ರಮೇಶ್ ಕುಮಾರ್ ರವರು ಮಾತನಾಡಿ ಸರ್ಕಾರ ನೀರನ್ನು ಖನಿಜ ಎಂದು ಪರಿಗಣಿಸಿ ಘೋಷಣೆ ಮಾಡಬೇಕು. ಹನಿ ನೀರಾವರಿ ಪದ್ದತಿಯನ್ನು ಕಡ್ಡಾಯ ಮಾಡಬೇಕು. ಎಲ್ಲಾ ಕಲ್ಯಾಣಿಗಳನ್ನು ಪುರ್ನಜೀವಗೊಳಿಸಬೇಕು. ಕೆರೆ, ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಬೇಕು. ನೀಲಗಿರಿ ಅಕೇಶಿಯಾ, ಬಳ್ಳಾರಿ ಜಾಲಿ, ಕರಿ ಜಾಲಿ, ಪಾರ್ಥೇನಿಯಂ ಗಿಡಗಳನ್ನು ತೆಗಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ಗ್ರಾಮ ಸಭೆಯಲ್ಲಿ ಗ್ರಾಮದ ಹಿತ ಇರಬೇಕು ಪಾರದರ್ಶಕವಾಗಿ ನೀರನ್ನು ತಡೆದು ಅಂತರ್ಜಲ ವೃದ್ಧಿಸಿ ರೈತರಿಗೆ ಅನುಕೂಲವಾಗುವಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ನೀರು ಇರುವಲ್ಲಿ ನೀರು ವ್ಯರ್ಥ ಮಾಡುತ್ತೇವೆ, ನೀರು ಇಲ್ಲದ ಕಡೆ ನೀರಿಗೆ ಪರದಾಡುತ್ತೇವೆ ಎಂದು ಅವರು ತಿಳಿಸಿದರು.
ಕೆ.ಜಿ.ಫ್ ವಿಧಾನಸಭಾ ಕ್ಷೇತ್ರದ ಶಾಸಕಾರದ ರೂಪ ಕಲಾ ಶಶಿಧರ್ ರವರು ಮಾತನಾಡಿ ಜಿಲ್ಲೆಯ ರೈತರು ಕೃಷಿ ಮತ್ತು ಹೈನುಗಾರಿಕೆಯನ್ನು ನಂಬಿಕೊಂಡಿದ್ದಾರೆ. ಬಹಳ ವರ್ಷಗಳಿಂದ ನೀರು ಬರುತ್ತದ್ದೆ ಎಂಬ ನಿರೀಕ್ಷೆಯಲ್ಲಿದ್ದಾರೆ ಅವರಿಗೆ ಅನುಕೂಲವಾಗುವಂತೆ ಕೆಲಸ ಮಾಡಬೇಕು ಭೂ ಜಲ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು. ರೈತರು ಒಳ್ಳೆಯ ಜೀವನ ಕಟ್ಟಿಕೊಳ್ಳುವ ಸನ್ನಿವೇಶ ನಿರ್ಮಿಸಬೇಕು ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯರಾದ ವೈ. ಎ. ನಾರಾಯಣಸ್ವಾಮಿ ರವರು ಮಾತನಾಡಿ ರೈತರ ಜೀವನ ಹಸನಾಗಿಸಬೇಕು. ಅಂತರ್ಜಾಲ ಹೆಚ್ಚಿಸಿ ಜಿಲ್ಲೆಯ ಜನತೆಯ ಆಶಯ ಈಡೇರಿಸಬೇಕು. ಜಿಲ್ಲೆಯ ರೈತರು ಸುಮಾರು 1400 ಅಡಿಗಳ ಆಳದಿಂದ ನೀರು ತಂದು ಬೆಳೆ ಬೆಳೆದು ಬದಕು ಕಟ್ಟಿ ತೋರಿಸಿದ್ದಾರೆ. ನೀರನ್ನು ತುಪ್ಪದಂತೆ ಬಳಸಬೇಕು ಜೇನಿನಂತೆ ಸವಿಯಬೇಕು ಎಂದ ಅವರು ಕೆ ಸಿ ವ್ಯಾಲಿ 2ನೇ ಹಂತದ ನೀರನ್ನು ಶೀಘ್ರವಾಗಿ ಜಿಲ್ಲೆಗೆ ಹರಿಸಿ ಎಂದು ಸಚಿವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ನಾಗೇಶ್, ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜ್, ನಜೀರ್ ಅಹಮ್ಮದ್, ಸಣ್ಣ ನೀರಾವರಿ ಮತ್ತು ಅಂರ್ತಜಲ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಮೃತ್ಯಂಜಯ, ಜಿಲ್ಲಾಧಿಕಾರಿಗಳಾದ ಡಾ|| ಆರ್. ಸೆಲ್ವಮಣಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿಗಳಾದ ಎನ್.ಎಂ.ನಾಗರಾಜ್, ತಹಶೀಲ್ದಾರರಾದ ಶೋಭಿತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
The post ಅಂತರ್ಜಲವನ್ನು ವೃದ್ಧಿಸಿ, ಸಂರಕ್ಷಿಸಲು ಅಟಲ್ ಭೂಜಲ ಯೋಜನೆ ಜಾರಿ –ಜೆ.ಸಿ.ಮಾಧುಸ್ವಾಮಿ appeared first on Hai Sandur kannada fortnightly news paper.
]]>The post ಕಿಸಾನ್ ಸ್ಪೆಷಲ್ ಪಾರ್ಸೆಲ್ ರೈಲ್ಗೆ ಸಂಸದರಿಂದ ಚಾಲನೆ appeared first on Hai Sandur kannada fortnightly news paper.
]]>The post ಕಿಸಾನ್ ಸ್ಪೆಷಲ್ ಪಾರ್ಸೆಲ್ ರೈಲ್ಗೆ ಸಂಸದರಿಂದ ಚಾಲನೆ appeared first on Hai Sandur kannada fortnightly news paper.
]]>The post ಮಾರ್ಕಂಡೇಯ ಡ್ಯಾಮ್ನಲ್ಲಿ ಮೀನುಗಾರಿಕೆ ಮತ್ತು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು – ಎಸ್.ಅಂಗಾರ appeared first on Hai Sandur kannada fortnightly news paper.
]]>ಇಂದು ಬೂದಿಕೋಟೆಯ ಮಾರ್ಕಂಡೇಯ ಡ್ಯಾಮ್ ಮತ್ತು ಮಾಕರ್ಂಡೇಯ ಮೀನು ಮರಿ ಉತ್ಪಾದನಾ ಕೇಂದ್ರಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿ ನಂತರ ಅವರು ಮಾತನಾಡಿ ಶ್ರೀಘ್ರದಲ್ಲೇ ವರುಣನ ಕೃಪೆಯಿಂದ ಹಾಗೂ ಕೆಸಿ ವ್ಯಾಲಿ ನೀರಿನಿಂದ ಮಾಕರ್ಂಡೇಯ ಡ್ಯಾಮನ್ನು ತುಂಬಿಸಲಾಗುವುದು ಎಂದು ತಿಳಿಸಿದರು.
ಮೀನುಮರಿ ಉತ್ಪಾದನೆ ಮತ್ತು ಸಾಕಾಣಿಕೆಗೆ ಹೆಚ್ಚಿನ ಆದ್ಯತೆ ಕೊಡಬೇಕು. ಮೀನುಮರಿ ಉತ್ಪಾದನೆಯಲ್ಲಿ ಕರಾವಳಿ ಮತ್ತು ಒಳನಾಡು ಎಂದು ಎರಡು ವಿಧವಾಗಿ ಉತ್ಪಾದಿಸಲಾಗುತ್ತದೆ. ಒಳನಾಡು ಮೀನುಮರಿ ಉತ್ಪಾದನೆಯಲ್ಲಿ ಯಾವ ತಳಿ ಮೀನುಮರಿಗಳನ್ನು ಉತ್ಪಾದಿಸಬಹುದು ಎಂದು ಅಧಿಕಾರಿಗಳೊಂದಿಗೆ ಚರ್ಚಿಸಿ ಅಭಿವೃದ್ಧಿ ಪಡಿಸುತ್ತೇವೆ ಎಂದು ಅವರು ತಿಳಿಸಿದರು.
ಈ ಭಾಗದಲ್ಲಿ ಕರಾವಳಿ ಮೀನಿನ ಬೇಡಿಕೆ ಹೆಚ್ಚಾಗಿದೆ ಆದ್ದರಿಂದ ಗ್ರಾಹಕರಿಗೆ ಉತ್ತಮ ಗುಣ ಮಟ್ಟದ ಮೀನುಗಳನ್ನು ಮಾರಾಟಮಾಡಲು ಹಾಗೂ ಮೀನುಗಾರರಿಗೆ ಅನುಕೂಲವಾಗುವಂತೆ ಶೀತಲ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
ಕೋಲಾರ ಲೋಕಸಭಾ ಕ್ಷೇತ್ರದ ಸಂಸದರಾದ ಎಸ್.ಮುನಿಸ್ವಾಮಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಎರಡು ಸಾವಿರಕ್ಕೂ ಹೆಚ್ಚಿನ ಕೆರೆಗಳಿವೆ. ಕೆಸಿ ವ್ಯಾಲಿ ನೀರಿನಿಂದ ಅನೇಕ ಕೆರೆಗಳು ತುಂಬಿವೆ. ಮಳೆಯು ಚೆನ್ನಾಗಿ ಆಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ರೈತರಿಗೆ, ಜನರಿಗೆ ಹಾಗೂ ಸರ್ಕಾರಕ್ಕೆ ಅನುಕೂಲವಾಗುವಂತೆ ಹೆಚ್ಚಿನ ಮೀನು ಸಾಕಾಣಿಕೆ ಮತ್ತು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಸಚಿವರಲ್ಲಿ ಮನವಿ ಮಾಡಿದರು.
ಕರೋನಾ ಸಂದರ್ಭದಲ್ಲಿ ಕೆರೆಗಳಲ್ಲಿ ಮೀನು ಸಾಕಾಣಿಕೆ ಮಾಡಿರುವವರಿಗೆ ಮೀನು ಮಾರಾಟ ಮಾಡಲು ಇನ್ನೂ ಸ್ವಲ್ಪ ದಿನ ಕಾಲಾವಕಾಶ ಮಾಡಿಕೊಡುವಂತೆ ಸಚಿವರಲ್ಲಿ ಮನವಿ ಮಾಡಿದರು.
ಮಾಕರ್ಂಡೇಯ ಡ್ಯಾಮನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸುವುದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಲ್ಲಿನ ಗತವೈಭವ ಮರುಕಳಿಸಲಿದೆ. ಎಲ್ಲರೂ ಒಟ್ಟಾಗಿ ಸೇರಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಹೇಶ್, ಜಿಲ್ಲಾ ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ಡಾ|| ಸಿ.ಎಸ್.ಅನಂತ, ಬೇತಮಂಗಲ ಮೀನುಮರಿ ಉತ್ಪಾದನೆ ಕೇಂದ್ರದ ಸಹಾಯಕ ನಿರ್ದೇಶಕರಾದ ಲಕ್ಷ್ಮಿಕಾಂತ್, ಶ್ರೀನಿವಾಸಪುರದ ಮೀನುಮರಿ ಉತ್ಪಾದನೆ ಕೇಂದ್ರದ ಸಹಾಯಕ ನಿರ್ದೇಶಕರಾದ ಮಾನಯ್ಯ, ಮಾರ್ಕಂಡೇಯ ಮೀನು ಮರಿ ಉತ್ಪಾದನೆ ಕೇಂದ್ರದ ಸಹಾಯಕ ನಿರ್ದೇಶಕರಾದ ಸತೀಶ್ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಜವರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
The post ಮಾರ್ಕಂಡೇಯ ಡ್ಯಾಮ್ನಲ್ಲಿ ಮೀನುಗಾರಿಕೆ ಮತ್ತು ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು – ಎಸ್.ಅಂಗಾರ appeared first on Hai Sandur kannada fortnightly news paper.
]]>The post ಮಾವು ಬೆಳೆಗಾರರ ನಷ್ಟ ತಪ್ಪಿಸಲು ಮಾವು ಸಂಸ್ಕರಣಾ ಮತ್ತು ಶೀತಲ ಸಂಗ್ರಹ ಘಟಕಗಳ ಸ್ಥಾಪನೆ – ಆರ್.ಶಂಕರ್ appeared first on Hai Sandur kannada fortnightly news paper.
]]>The post ಮಾವು ಬೆಳೆಗಾರರ ನಷ್ಟ ತಪ್ಪಿಸಲು ಮಾವು ಸಂಸ್ಕರಣಾ ಮತ್ತು ಶೀತಲ ಸಂಗ್ರಹ ಘಟಕಗಳ ಸ್ಥಾಪನೆ – ಆರ್.ಶಂಕರ್ appeared first on Hai Sandur kannada fortnightly news paper.
]]>The post ಕೌಶಲ್ಯಾಭಿವೃದ್ಧಿ ಪ್ರತಿಯೊಬ್ಬ ವ್ಯಕ್ತಿಯ ಜೀವನೋಪಾಯಕ್ಕೆ ಬಳಕೆಗೆ ಬರಬೇಕು –ಡಾ|| ಆರ್.ಸೆಲ್ವಮಣಿ appeared first on Hai Sandur kannada fortnightly news paper.
]]>The post ಕೌಶಲ್ಯಾಭಿವೃದ್ಧಿ ಪ್ರತಿಯೊಬ್ಬ ವ್ಯಕ್ತಿಯ ಜೀವನೋಪಾಯಕ್ಕೆ ಬಳಕೆಗೆ ಬರಬೇಕು –ಡಾ|| ಆರ್.ಸೆಲ್ವಮಣಿ appeared first on Hai Sandur kannada fortnightly news paper.
]]>