The post ಸಾಹಿತ್ಯ ಸಂಘಗಳು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಏಕಕಾಲಕ್ಕೆ ಕಟ್ಟಿ ಕೊಟ್ಟಿವ; ಡಾಕ್ಟರ್ ಬಸವರಾಜ ಸಬರದ. appeared first on Hai Sandur kannada fortnightly news paper.
]]>ಕಾರ್ಯಕ್ರಮವನ್ನು ಸಂಘದ ಸಂಸ್ಥಾಪಕ ವಂಶಸ್ಥರಾದ ಬುಕ್ಕಪಟ್ಟಣಂ ಆದಿತ್ಯನಾರಾಯಣ ರಾಜಗುರು ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಖ್ಯಾತ ಲೇಖಕ ಡಾಕ್ಟರ್ ಬಸವರಾಜ ಸಬರದ ಅವರು ಶ್ರೀಮತಿ ಜ್ಯೋತಿ ದೇವಣಗಾವ ಅವರ ಗಜಲ್ ಕೃತಿ “ಅತ್ತರಿನ ಭರಣಿ” ಪರಿಚಯವನ್ನು ನೀಡುತ್ತಾ ಉರ್ದು ಕಾವ್ಯದ ಅತ್ತರ್ ಎಂದರೆ ಗಜಲ್ ಆಗಿದ್ದು, ಕಾವ್ಯ ಸುವಾಸನೆಯುಳ್ಳದ್ದು, ಕಾಂತಾಸಮ್ಮಿಹಿತವಾಗಿದ್ದು,ನವಿರಾದ ಪಿಸುಮಾತಿನ ಇಷ್ಕ್ ಯಿದ್ದಾಗಲೇ ಗಜಲ್ ಮೈದಾಳುತ್ತದೆ ಎಂದು ಅಭಿಪ್ರಾಯಪಟ್ಟರು.
ಲೇಖಕ ಶ್ರೀ ಕೃಷ್ಣಮೂರ್ತಿ ಕೈದಾಳ ಅವರು ಮಹಾಂತೇಶ ಗೋನಾಲ ಅವರ ಕೃತಿ “ಚಾಡಮಾರಿ ಶಹರಗಳು” ಕುರಿತು ಮಾತನಾಡುತ್ತಾ ಮೊದಲ ಕೃತಿಯಲ್ಲಿ ಮೌನವನ್ನು ಆಶ್ರಯಿಸಿದ ಕವಿಮನ ಮುರಿದು ಬೀಳುತ್ತಿರುವ ಚಂದ್ರನನ್ನು ಕಂಡು, ಈ ಶಹರುಗಳ ಚಾಡಮಾರಿತನವನ್ನು ಕಂಡು ಘಾಸಿಗೊಂಡಿದ್ದಾನೆ ಎಂದು ಅಭಿಪ್ರಾಯಿಸಿದರು,
ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಉಸ್ತಾದ್ ಅಬ್ದುಲ್ ರಬ್ ಮುಖ್ಯಸ್ಥರು ಉರ್ದು ಮತ್ತು ಪರ್ಷಿಯನ್ ಅಧ್ಯಯನ ವಿಭಾಗ ಕಲಬುರ್ಗಿ ಇವರು ಗಜಲ್ ನ ಮೂಲ ಮತ್ತು ಅರ್ಥ ವಿನ್ಯಾಸಗಳನ್ನು ಹಲವು ಶೇರ್ ಮತ್ತು ನಜಮ್ ಗಳ ಉದಾಹರಿಸುವದರ ಮೂಲಕ ಸಭೆಗೆ ಪ್ರಸ್ತುತಪಡಿಸಿದರು.
ಸಂಘದ ಅಧ್ಯಕ್ಷರಾದ ಶ್ರೀ ಬಸವರಾಜ ಜಮದರಾಖಾನಿ ಅವರು ಅಧ್ಯಕ್ಷೀಯ ನುಡಿಗಳನ್ನು,ಉಪಾಧ್ಯಕ್ಷರಾದ ಶ್ರೀ ಜೇ ಆಗಷ್ಟಿನ್ ನಿವೃತ್ತ ಮುಖ್ಯ ನ್ಯಾಯಾಧಿಕಾರಿಗಳು ಗುಲಬರ್ಗಾ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು, ಕೃತಿಯ ಲೇಖಕರಾದ ಶ್ರೀಮತಿ ಜ್ಯೋತಿ ದೇವಣಗಾವ್ ಗೋಗಿ ಮತ್ತು ಮಹಾಂತೇಶ್ ಗೋನಾಲ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ ರಾಜಾ ಮುಕುಂದ ನಾಯಕ್,ಶ್ರೀ ಚಂದ್ರಕಾಂತ ಭಂಡಾರೆ, ಶ್ರೀ ಲಕ್ಷ್ಮಣ ಶಾಸ್ತ್ರಿ ಹೆಬ್ಬಾಳ ಅವರು ಭಾಗವಹಿಸಿದ್ದರು ಬಸವರಾಜ್ ದೇಶಮುಖ್, ರಾಘವೇಂದ್ರ ಗುಡುಗುಂಟಿ, ನಬೀಲಾಲ್ ಮಕಾನ್ದಾರ್,ಶ್ರೀ ಹರಿರಾವ್ ಆದೋನಿ, ನಿಂಗನಗೌಡ ದೇಸಾಯಿ, ಶರಣಬಸವ ಯಾಳವಾರ,ಮಲ್ಲಿನಾಥ ತಳವಾರ ಕುತುಬುದ್ದಿನ್ ಅಮ್ಮಾಪುರ, ಎ ಕಮಲಾಕರ್, ಕನಕಪ್ಪ ವಾಗನಗೇರಿ,ಗೋಪಣ್ಣ ಯಾದವ, ಜಯಲಲಿತಾ ಪಾಟೀಲ್,ನಿರ್ಮಲ ರಾಜಗುರು, ಶಕುಂತಲಾ ಜಾಲವಾದಿ, ಪಾರ್ವತೀ ದೇಸಾಯಿ ಹಾಜರಿದ್ದರು.ಡಾಕ್ಟರ್ ಸತ್ಯನಾರಾಯಣ ಅಲದರ್ತಿ, ಮಲ್ಲಯ್ಯ ಕಮತಗಿ,ದೊಡ್ಡಮಲ್ಲಿಕಾರ್ಜುನ ಹುದ್ದಾರ್, ಸಜ್ಜನಸೆಟ್ಟಿ ಉಪಸ್ಥಿತರಿದ್ದರು
ಶ್ರೀನಿವಾಸ ಜಾಲವಾದಿ ಸ್ವಾಗತಿಸಿದರು, ಶಿವಕುಮಾರ್ ಮಸ್ಕಿ ನಿರೂಪಿಸಿದರು,ಹೆಚ್ ರಾಠೋಡ್ ವಂದಿಸಿದರು.
The post ಸಾಹಿತ್ಯ ಸಂಘಗಳು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಏಕಕಾಲಕ್ಕೆ ಕಟ್ಟಿ ಕೊಟ್ಟಿವ; ಡಾಕ್ಟರ್ ಬಸವರಾಜ ಸಬರದ. appeared first on Hai Sandur kannada fortnightly news paper.
]]>The post ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ: ಕೋವಿಡ್ ನಿಯಮ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ appeared first on Hai Sandur kannada fortnightly news paper.
]]>ಗೌರಿ- ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿ ಮಾರ್ಗಸೂಚಿಗಳನ್ನು ವಿವರಿಸಿದರು.
ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ ತಮ್ಮ ಮನೆಗಳಲ್ಲಿ ಆಚರಿಸತಕ್ಕದ್ದು. ಇದನ್ನು ಹೊರತುಪಡಿಸಿ, ಬೇರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್, ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ – ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.
ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯಮೆರವಣಿಗೆ,ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
ಪಾರಂಪರಿಕ ಗೌರಿ- ಗಣೇಶ ಮೂರ್ತಿಯನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಅಥವಾ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ, ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಕಲ್ಯಾಣಿ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸತಕ್ಕದ್ದು.
ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ, ಸ್ಯಾನಿಟೈಸೇಷನ್ ಮಾಡತಕ್ಕದ್ದು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸತಕ್ಕದ್ದು.
ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್- 19 ಸಮುಚಿತ ವರ್ತನೆಯಂತೆ ಕಡ್ಡಾಯವಾಗಿ ಮುಖಗವಸನ್ನು ಧರಿಸುವುದು, ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.
ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ , ಜಿಲ್ಲಾಡಳಿತ, ಪೋಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
ಮನರಂಜನೆ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಇತರೆ ಒಗ್ಗೂಡುವಿಕೆಗಳನ್ನು ಮತ್ತು ಬೃಹತ್ ಸಭೆ ಸಮಾರಂಭಗಳನ್ನು ನಿಷೇಧಿಸಿಲಾಗಿದ್ದು, ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ ಸಮಾರಂಭಗಳಿಗೆ ಅನುಮತಿ ನೀಡಲಾಗಿರುವುದಿಲ್ಲ.
ಹಬ್ಬ ಹರಿದಿನಗಳು ಸಮಾಜದಲ್ಲಿ ಶಾಂತಿ , ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಯಾದಗಿರಿ ಸಿ.ಪಿ.ಐ ಸೋಮಶೇಖರ್ ಕೆಂಚಿರೆಡ್ಡಿ, ಸಮಾಜದ ಮುಖಂಡರಾದ ಸಿದ್ದಪ್ಪ ಎಸ್ ಹೊಟ್ಟಿ, ಅಯ್ಯಣ್ಣಾ ಹುಂಡೇಕಾರ, ಭವರಿಲಾಲ ಧೋಖಾ, ಲಾಯಕ ಹುಸೇನ್ ಬಾದಲ್, ಅಬ್ದುಲ್ ವಾಹಿದಮಿಯ್ಯ, ಶಿವಾಜಿ ಸೇನಾ ಸಂಸ್ಥಾಪಕ ಅಧ್ಯಕ್ಷ ಪರಶುರಾಮ ಶೇಗುರಕರ್ ಹಾಗೂ ಜಿಲ್ಲೆಯ ಎಲ್ಲಾ ತಹಶೀಲ್ದಾರರು ಉಪಸ್ಥಿತರಿದ್ದರು.
The post ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ ಆಚರಿಸಿ: ಕೋವಿಡ್ ನಿಯಮ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ appeared first on Hai Sandur kannada fortnightly news paper.
]]>The post ದಮನಿತರ,ಅನಾಥ ಮಕ್ಕಳ, ಮಂಗಳಮುಖಿಯರ ಸಮಸ್ಯೆಗೆ ಸ್ವಂದಿಸಲು ಜಿಲ್ಲಾಧಿಕಾರಿ ಸೂಚನೆ appeared first on Hai Sandur kannada fortnightly news paper.
]]>ಸಭೆಯಲ್ಲಿ ಫಲಾನುಭವಿಗಳನ್ನು (ಖಂಓಆAಒIZAಖಿIಔಓ ) ಯಾದೃಚ್ಚೀಕರಣ ಮುಖಾಂತರ ಎಲ್ಲರಿಗೂ ಸಮಾನವಕಾಶ ಕೊಡುವುದರ ಮುಖಾಂತರ ಆಯ್ಕೆ ಮಾಡಲಾಯಿತು.
ಉದ್ಯೋಗಿನಿ ಯೋಜನೆಯಡಿಯಲ್ಲಿ ಜಿಲ್ಲೆಗೆ ಭೌತಿಕ ಗುರಿ 33, ಆರ್ಥಿಕ 49.75 ಲಕ್ಷಗಳು ನಿಗದಿಯಾಗಿದ್ದು, ಅದರಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಗೆ 09, ಆರ್ಥಿಕ 13.57 ಲಕ್ಷ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಗೆ ಭೌತಿಕ 24, ಆರ್ಥಿಕ 36.18 ಲಕ್ಷ ನಿಗದಿಯಾಗಿದೆ. ಅದರಂತೆ ವಿಧಾನ ಸಭಾ ಕ್ಷೇತ್ರವಾರು ಗುರಿಯನ್ನು ಹಂಚಿಕೆ ಮಾಡಿದರು.
ಸಮೃದ್ದಿ ಯೋಜನೆಯ ಪರಿಶಿಷ್ಟ ಜಾತಿ ಉಪಯೋಜನೆಯಡಿ ಪ.ಜಾ ಮತ್ತು ಪ.ಪಂಗಡ ದ ಮಹಿಳಾ ಬೀದಿ- ಬದಿ ವ್ಯಾಪಾರಿಗಳಿಗೆ ನೇರವಾಗಿ ತಲಾ 10 ಸಾವಿರ ಸಹಾಯಧನ ಸೌಲಭ್ಯ ಒದಗಿಸಿ ಕೊಡಲು ಜಿಲ್ಲೆಗೆ ಭೌತಿಕ ಗುರಿ- 26 ಮತ್ತು ಪ.ಪಂಗಡಕ್ಕೆ ಭೌತಿಕ 338 ನಿಗದಿಯಾಗಿದ್ದು ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮಾಡಿದರು.
ಕರ್ನಾಟಕ ರಾಜ್ಯ ಟ್ರಾನ್ಸ್ ಜೆಂಡರ್ಸ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅವರಿಂದ ಮೂಲ ಮಾಹಿತಿ ಪಡೆದು , ದಮನಿತ ಮಹಿಳೆಯರ ಜೀವನಮಟ್ಟವನ್ನು ಸಮಗ್ರವಾಗಿ ಸುಧಾರಿಸಲು ಅವರಿಗೆ ಇಲಾಖೆಗಳ ಯೋಜನೆಯ ಸೇವೆಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪ್ರಭಾಕರ್ ಎಸ್.ಕವಿತಾಳ, ನಗರಸಭೆ ಆಯುಕ್ತ ಭೀಮಣ್ಣನಾಯಕ, ಸಮಾಜ ಕಲ್ಯಾಣ ಅಧಿಕಾರಿ ರಾಮಚಂದ್ರಗೊಳಾ ಮತ್ತು ಇನ್ನಿತರರು ಉಪಸ್ಥಿತರಿದ್ದರು.
The post ದಮನಿತರ,ಅನಾಥ ಮಕ್ಕಳ, ಮಂಗಳಮುಖಿಯರ ಸಮಸ್ಯೆಗೆ ಸ್ವಂದಿಸಲು ಜಿಲ್ಲಾಧಿಕಾರಿ ಸೂಚನೆ appeared first on Hai Sandur kannada fortnightly news paper.
]]>The post ಕಂದಾಯ ದಿನಾಚರಣೆ ಪ್ರಯುಕ್ತ ಗ್ರಾಮ ಸಹಾಯಕರಿಗೆ ಪುಡ್ ಕಿಟ್ ವಿತರಣೆಗೆ ಜಿಲ್ಲಾಧಿಕಾರಿ ಚಾಲನೆ. appeared first on Hai Sandur kannada fortnightly news paper.
]]>ಈ ವೇಳೆ ತಹಶೀಲ್ದಾರ ಕಚೇರಿಯ ಸಿಬ್ಬಂದಿಗಳಾದ ಗ್ರಾಮ ಸಹಾಯಕರಿಗೆ ಆಹಾರ ಧಾನ್ಯದ ಕಿಟ್ ಗಳ ವಿತರಣೆಗೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.
ಜಿಲ್ಲೆಯ 6 ತಾಲೂಕುಗಳ ಪೈಕಿ, ಭೂಮಿ ತಂಡಕ್ಕೆ ಅತ್ಯುತ್ತಮ ಹಾಗೂ ಅಸಾಧಾರಣ ನಾಯಕತ್ವವನ್ನು ನೀಡಿ ಮಾರ್ಚ್ – 2021 ರ ಮಾಹೆಯಲ್ಲಿ ಯಾದಗಿರಿ ತಾಲೂಕು ಪ್ರಥಮ ಶ್ರೇಯಾಂಕವನ್ನು ಪಡೆದಿರುವುದಕ್ಕೆ ತಹಶೀಲ್ದಾರರ ಕಾರ್ಯಕ್ಕೆ ಜಿಲ್ಲಾಧಿಕಾರಿ ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ತಹಶೀಲ್ದಾರ ಚೆನ್ನಮಲ್ಲಪ್ಪ ಘಂಟಿ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
The post ಕಂದಾಯ ದಿನಾಚರಣೆ ಪ್ರಯುಕ್ತ ಗ್ರಾಮ ಸಹಾಯಕರಿಗೆ ಪುಡ್ ಕಿಟ್ ವಿತರಣೆಗೆ ಜಿಲ್ಲಾಧಿಕಾರಿ ಚಾಲನೆ. appeared first on Hai Sandur kannada fortnightly news paper.
]]>The post ಕೋವಿಡ್ 19 ಕುರಿತು ತುರ್ತು ಸಭೆ ಕೊರೊನಾ 2ನೇ ಅಲೆ ತಡೆಯಲು ಸರ್ವರ ಸಹಕಾರ ಅಗತ್ಯ :ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ appeared first on Hai Sandur kannada fortnightly news paper.
]]>ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗ0ಣದಲ್ಲಿ ಸೋಮವಾರ ಕೋವಿಡ್ 19ಗೆ ಸಂಬ0ಧಿಸಿದ0ತೆ ಸಂಪರ್ಕ ಪತ್ತೆಹಚ್ಚುವಿಕೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್ 2ನೇ ಅಲೆ ತಡೆಯಲು
ಜಿಲ್ಲಾ ಆರೋಗ್ಯ ಇಲಾಖೆ ಕಾರ್ಯನಿರ್ವಹಿಸುತ್ತಿದ್ದು, ಕೊರೊನಾ ಪಾಸಿಟಿವ್ ವರದಿ ಬಂದವರ ಪ್ರಾಥಮಿಕ ಸಂಪರ್ಕ ಮತ್ತು ದ್ವಿತೀಯ ಸಂಪರ್ಕದಲ್ಲಿ ಇರುವರ ಪತ್ತೆಹಚ್ಚವುದು ಬಹಳ ಮುಖ್ಯವಾಗಿರುತ್ತದೆ ಎಂದವರು ಹೇಳಿದರು.
ಜಿಲ್ಲಾಧಿಕಾರಿಗಳ ಆದೇಶದನ್ವಯ ಸಂಪರ್ಕ ಪತ್ತೆಹಚ್ಚುವ ನಿಟ್ಟಿನಲ್ಲಿ ಶಿಕ್ಷಕರನ್ನು ನೇಮಿಸಿ ಮತ್ತು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು.
ಕೋವಿಡ್ ರೋಗಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಕೋವಿಡ್ ಪರೀಕ್ಷೆ ನಂತರ ನಿಮ್ಮ ಸಂಪರ್ಕದಲ್ಲಿರುವರು,ಅವರ ಊರು,ಪ್ರದೇಶ,ಮನೆಯ ಸಮೀಪದ ದೇವಸ್ಥಾನ, ಮಸೀದಿ ಮುಂತಾದವುಗಳ ಲ್ಯಾಂಡ್ ಮಾರ್ಕ್ ಬಗ್ಗೆ, ಅವರು ಕೆಲಸ ಮಾಡುವ ಸ್ಥಳದ ಬಗ್ಗೆ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಉತ್ತರ ಪಡೆದ ನಂತರ ಮಾಹಿತಿಯನ್ನು ಛಿoಟಿಣಚಿಛಿಣ ಣಡಿಛಿiಟಿg ಚಿಠಿಠಿ ನಲ್ಲಿ ಅಪ್ಲೋಡ್ ಮಾಡಬೇಕು. ಇದರಿಂದ ಕೋವಿಡ್ 2ನೇ ಅಲೆಯನ್ನು ತಡೆಯಲು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದುಮತಿ ಕಾಮಶೆಟ್ಟಿ ಮಾತನಾಡಿ, ಈಗಾಗಲೇ ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರುವರ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದ್ದು, ಒಂದು ವೇಳೆ ಇವರಲ್ಲಿ ಪಾಸಿಟಿವ್ ಪ್ರಕರಣಗಳು ಕಂಡುಬAದರೆ ಅವರ ಸಂಪರ್ಕದಲ್ಲಿರುವ ಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಗಳ ಅಭಾವವಿರುವ ಕಾರಣ ಶಿಕ್ಷಕರನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ ಎಂದರು.
ಕೊರೊನಾ ಸೋಂಕಿನ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿರುವರು,ದ್ವಿತೀಯ ಸಂಪರ್ಕದಲ್ಲಿರುವರು ಮತ್ತು ಅವರ ಪ್ರಯಾಣದ ವಿವರವನ್ನು ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ವಡಗೇರಾ ತಹಸೀಲ್ದಾರ್ ಸುರೇಶ ಅಂಕಲಗಿ, ಸುರುಪುರ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ನಾಗರಾಜ ಪಾಟೀಲ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು,ಶಿಕ್ಷಕರು ಸಭೆಯಲ್ಲಿದ್ದರು.
The post ಕೋವಿಡ್ 19 ಕುರಿತು ತುರ್ತು ಸಭೆ ಕೊರೊನಾ 2ನೇ ಅಲೆ ತಡೆಯಲು ಸರ್ವರ ಸಹಕಾರ ಅಗತ್ಯ :ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ appeared first on Hai Sandur kannada fortnightly news paper.
]]>The post ಮೇಘದೂತ ಹಾಗೂ ದಾಮಿನಿ ಆ್ಯಪನ ಬಳಕೆ ಬಗ್ಗೆ ರೈತರಿಗೆ ಜಾಗೃತಿ ತರಬೇತಿ ಕಾರ್ಯಕ್ರಮ appeared first on Hai Sandur kannada fortnightly news paper.
]]>The post ಮೇಘದೂತ ಹಾಗೂ ದಾಮಿನಿ ಆ್ಯಪನ ಬಳಕೆ ಬಗ್ಗೆ ರೈತರಿಗೆ ಜಾಗೃತಿ ತರಬೇತಿ ಕಾರ್ಯಕ್ರಮ appeared first on Hai Sandur kannada fortnightly news paper.
]]>The post ಸ್ವಾತಂತ್ರ್ಯದ ಅಮೃತ ಮಹೋತ್ಸವ: ಸರದಾರ ವಲ್ಲಭಭಾಯಿ ಪಟೇಲ್ ಛಾಯಾಚಿತ್ರ ಪ್ರದರ್ಶನ appeared first on Hai Sandur kannada fortnightly news paper.
]]>ಬೆಳಗಾವಿ,ಮಾ.12 : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಶಿಕ್ಷಣ ಇಲಾಖೆಯ ವತಿಯಿಂದ ನಗರದ ಸರದಾರ ಪ್ರೌಢಶಾಲೆಯಲ್ಲಿ ಸರದಾರ ವಲ್ಲಭಭಾಯಿ ಪಟೇಲ್ ಅವರ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಶುಕ್ರವಾರ (ಮಾ.12) ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಶುಭ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ತ್ಯಾಗ-ಬಲಿದಾನಗೈದ ಮಹನೀಯರನ್ನು ನೆನಪಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಸ್ವಾತಂತ್ರ್ಯೋತ್ಸವದ 75 ವರ್ಷಾಚರಣೆ ಸಂದರ್ಭದಲ್ಲಿ ಇಂದಿನ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ಕುರಿತು ಹಾಗೂ ದೇಶಕ್ಕಾಗಿ ಸರ್ವಸ್ವವನ್ನೂ ಅರ್ಪಿಸಿದ ಸ್ವಾತಂತ್ರ್ಯ ಸೇನಾನಿಗಳ ಬಗ್ಗೆ ತಿಳಿಸಿಕೊಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಸ್ವತಂತ್ರ ಸಂಸ್ಥಾನಗಳನ್ನು ಒಗ್ಗೂಡಿಸಿ ಒಂದು ಭಾರತ ದೇಶ ನಿರ್ಮಾಣದಲ್ಲಿ ಸರದಾರ ವಲ್ಲಭಭಾಯಿ ಪಟೇಲ್ ಅವರ ಪಾತ್ರ ಪ್ರಮುಖವಾಗಿದೆ. ಆದ್ದರಿಂದ ಅವರ ಜೀವನಸಾಧನೆಯನ್ನು ಅಪರೂಪದ ಛಾಯಾಚಿತ್ರಗಳ ಮೂಲಕ ತಿಳಿಸಿಕೊಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದರು.
ಛಾಯಾಚಿತ್ರ ಪ್ರದರ್ಶನ ಕುರಿತು ಮಾಹಿತಿಯನ್ನು ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಬಿ.ಪುಂಡಲೀಕ, ಸರದಾರ ವಲ್ಲಭಭಾಯಿ ಪಟೇಲ್ ಅವರ ಜೀವನದ ಪ್ರಮುಖ ಘಟ್ಟಗಳನ್ನು ಪರಿಚಯಿಸುವ 160 ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ ಎಂದು ತಿಳಿಸಿದರು.
ಇದಲ್ಲದೇ ಅವರ ಜೀವನ ಕುರಿತ ವಿಡಿಯೋ ಪ್ರದರ್ಶನ ಕೂಡ ನಡೆಸಲಾಗುತ್ತಿದೆ. ನಗರದ ಸರದಾರ ಹೈಸ್ಕೂಲಿನಲ್ಲಿ ನಾಲ್ಕು ದಿನಗಳ ಕಾಲ ಪ್ರದರ್ಶನ ನಡೆಯಲಿದ್ದು, ನಂತರದ ದಿನಗಳಲ್ಲಿ ವಿವಿಧ ತಾಲ್ಲೂಕುಗಳಲ್ಲಿ ಕೂಡ ಪ್ರದರ್ಶನ ನಡೆಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಾಜಶೇಖರ್ ಪಟ್ಟಣಶೆಟ್ಟಿ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
The post ಸ್ವಾತಂತ್ರ್ಯದ ಅಮೃತ ಮಹೋತ್ಸವ: ಸರದಾರ ವಲ್ಲಭಭಾಯಿ ಪಟೇಲ್ ಛಾಯಾಚಿತ್ರ ಪ್ರದರ್ಶನ appeared first on Hai Sandur kannada fortnightly news paper.
]]>The post ಸುರಪುರ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ,:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. appeared first on Hai Sandur kannada fortnightly news paper.
]]>ಜಿಲ್ಲೆಯ ಸುರಪುರ ನಗರಸಭೆ ಕಚೇರಿಯ ಸಭಾಂಗಣದಲ್ಲಿ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಿ.ಎಮ್.ಸ್ವನಿಧಿ ಯೋಜನೆಯಡಿಯಲ್ಲಿ ಸುಮಾರು 655 ಸಾಲದ ಅರ್ಜಿಗಳು ಬಂದಿದ್ದು, ಈ ಪೈಕಿ ಇನ್ನೂ 27 ಅರ್ಜಿಗಳಿಗೆ ಸಾಲ ದೊರೆತ್ತಿಲ್ಲ. ಈ ಬಗ್ಗೆ ಲೀಡ್ ಬ್ಯಾಂಕ್ ಮ್ಯಾನೇಜರ್ ಗಮನಹರಿಸಿ ಅರ್ಹ ಫಲಾನುಭವಿಗಳಿಗೆ ಸಾಲ ವಿತರಣೆ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.
ನಗರೋತ್ಥಾನ ಯೋಜನೆ ಅಡಿಯಲ್ಲಿ ನಗರದಲ್ಲಿ ಒಟ್ಟು 13 ಕಾಮಗಾರಿಗಳು ಮಂಜೂರಾಗಿದ್ದು, 11 ಕಾಮಗಾರಿಗಳು ಪೂರ್ಣಗೊಂಡಿವೆ. ಒಂದು ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲಾಗುತ್ತದೆ ಎಂದು ನಗರಸಭೆಯ ಪೌರಯುಕ್ತರು ಸಭೆಗೆ ಮಾಹಿತಿ ನೀಡಿದರು.
14 ನೇ ಹಣಕಾಸಿನ ಯೋಜನೆಯಲ್ಲಿ ಕೈಗೊಂಡ ಕಾಮಗಾರಿಗಳು ಕೂಡಲೇ ಮುಗಿಸಬೇಕು ಹಾಗೂ 15 ನೇ ಹಣಕಾಸಿನಲ್ಲಿ ಪ್ರಾರಂಭಗೊAಡ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಗಳಾಗಿ ಮುಗಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ. ಯೋಜನೆಯಲ್ಲಿ ಬಂದ ಅನುದಾನವನ್ನು ಸರಿಯಾಗಿ ಬಳಕೆ ಮಾಡಿ ಜನ ಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಹಾಗೂ ಸುರಪುರ ನಗರದ ಪ್ರತಿಯೊಂದು ಅಂಗಡಿ – ಮುಂಗಟ್ಟುಗಳಿAದ ತೆರಿಗೆಯನ್ನು ಕಡ್ಡಾಯವಾಗಿ ಶೇಕಡ 100% ರಷ್ಟು ಸಂಗ್ರಹಣೆ ಮಾಡುವ ನಿಟ್ಟಿನಲ್ಲಿ ಗಮನಹಿಸಬೇಕೆಂದು ಹೇಳಿದರು.
ವಿವಿಧ ವಸತಿ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಣೆ ಮಾಡಬೇಕು.
ರಸ್ತೆ ಸೇರಿದಂತೆ ವಿವಿಧ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿಗಳು
ಸುರಪುರ ನಗರದಲ್ಲಿ ನಗರೋತ್ಥಾನ ಯೋಜನೆ ಹಾಗೂ ಕೆ.ಕೆ.ಆರ್.ಡಿ.ಬಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಮಂಗಳವಾರ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ವೀಕ್ಷಿಸಿದರು.
ಮಂಡಲ ಬಟ್ಟಿ ಆಟೋ ಸ್ಟಾö್ಯಂಡ್ಯಿAದ ಮರಿಗೆಮ್ಮ ದೇವಸ್ಥಾನವರೆಗೆ ಹಾಗೂ ಮರಿಗೆಮ್ಮ ದೇವಸ್ಥಾನದಿಂದ ತಿಮ್ಮಾಪೂರ ಬಸ್ ನಿಲ್ದಾಣದವರಿಗೆ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾಮಗಾರಿ , ಕೆ.ಕೆ.ಆರ್.ಡಿ.ಬಿ ಯೋಜನೆಯಡಿಯಲ್ಲಿ ಸುಮಾರು 3ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ , ಪೈಪ್ಲೈನ್ ವಿಸ್ತೀರ್ಣ ಕಾಮಗಾರಿ ಹಾಗೂ ನಗರೋತ್ಥಾನ 3ನೇ ಹಂತದಡಿ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ತರಾಕಾರಿ ಮಳಿಗೆಗಳನ್ನು ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲಾ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಉತ್ತಮ ಗುಣಮಟ್ಟದಲ್ಲಿ ಕಾಮಗಾರಿಗಳಾಗಿ ಮುಗಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಪ್ರಭಾರಿ ಯೋಜನೆ ನಿರ್ದೇಶಕರಾದ ಪ್ರಕಾಶ ಜಿ.ರಜಪೂತ್, ಜಿಲ್ಲಾ ನಗರಾಭಿವೃದ್ಧಿ ಕೋಶ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಬಕ್ಕಪ್ಪ, ಸುರಪುರ ನಗರಸಭೆಯ ಪೌರಯುಕ್ತ ಜೀವನ್ ಕುಮಾರ್ ಸೇರಿದಂತೆ ಇತರರು ಸಭೆಯಲ್ಲಿ ಭಾಗಿಯಾಗಿದ್ದರು.
The post ಸುರಪುರ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ,:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. appeared first on Hai Sandur kannada fortnightly news paper.
]]>The post ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ appeared first on Hai Sandur kannada fortnightly news paper.
]]>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ನಡೆದ ಈ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ನಂತರ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಮಾತನಾಡಿ, ವರ್ಷಪೂರ್ತಿ ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಪುನಃಶ್ಚೇತನ ಕಾರ್ಯಕ್ರಮದಂತೆ ಇದ್ದು, ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಹಾಗೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳಬೇಕು. ದಿನನಿತ್ಯದ ಕರ್ತವ್ಯದಿಂದ ಹೆಚ್ಚಿನ ಒತ್ತಡಕ್ಕೆ ಒಳಗಾಗುವುದು ಸಹಜ. ಎಲ್ಲರೂ ಕೂಡಿ ಆಟ ಆಡಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಮನಸ್ಸು ಪುನಃಶ್ಚೇತನಗೊಳ್ಳುತ್ತದೆ ಎಂದರು.
ನೌಕರರು ಕ್ರೀಡಾಕೂಟಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ರೀಡಾಪಟುಗಳು ಕ್ರೀಡಾ ಮನೋಭಾವನೆ ಬೆಳೆಸಿಕೊಂಡು ಕ್ರೀಡಾ ಕೂಟದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದರು. ಇಲಾಖೆಯ ಕಾರ್ಯನಿರ್ವಹಿಸುತ್ತಿರುವ ನೌಕರರು ಹಲವು ಒತ್ತಡಗಳಿಂದ ಹೊರ ಬಂದು ನೆಮ್ಮದಿಯುಳ್ಳ ಜೀವನ ನಡೆಸಬೇಕಾದರೆ ಕ್ರೀಡೆ ಅತಿ ಅವಶ್ಯಕವಾಗಿದೆ ಎಂದು ಹೇಳಿದರು.
ಸರ್ಕಾರಿ ನೌಕರರಿಗೆ ಎರಡು ದಿನಗಳ ಕಾಲ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಈ ನಿಟ್ಟಿನಲ್ಲಿ ನೌಕರರಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆಯಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಎಸ್.ಪಾಟೀಲ್ ಯಡಿಯಾಪೂರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿದರು.
ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಗಿರಿಜಮ್ಮಾ ರೋಟ್ನಡಗಿ, ನಗರಸಭೆ ಅಧ್ಯಕ್ಷರಾದ ವಿಲಾಸ ಬಿ. ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಚಂಡ್ರಿಕಿ, ಜಿಲ್ಲಾ ಪಂಚಾಯತ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಋಷಕೇಶ ಭಗವಾನ್ ಸೋನಾವಣೆ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಮಹಿಪಾಲರಡ್ಡಿ ಮಾಲಿ ಪಾಟೀಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜು ಬಾವಿಹಳ್ಳಿ ಸೇರಿದಂತೆ ಇತರರು ಇದ್ದರು.
The post ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿಯಿಂದ ಚಾಲನೆ appeared first on Hai Sandur kannada fortnightly news paper.
]]>The post ಕೈಗಾರಿಕಾ ನಿವೇಶನ ಹಂಚಿಕೆ ಅರ್ಜಿಗಳ ಅನುಮೋದನೆ ಪಡೆದುಕೊಳ್ಳವಂತೆ ಸೂಚನೆ:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. appeared first on Hai Sandur kannada fortnightly news paper.
]]>ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಡೇಚೂರ ಕೈಗಾರಿಕಾ ಪ್ರದೇಶದಲ್ಲಿ ಈಗಾಗಲೇ ಹಂಚಿಕೆಯಾಗಿರುವ ಘಟಕಗಳಿಗೆ ಕೈಗಾರಿಕೆ ಸ್ಥಾಪಿಸುವ ಕುರಿತು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಕೆ.ಐ.ಎ.ಡಿ.ಬಿ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ವಿದ್ಯುತ್ ಸಂಪರ್ಕ ಕಲ್ಪಿಸಲು ಕೈಗೆತ್ತಿಕೊಳ್ಳಲಾಗಿರುವ ವಿದ್ಯುತ್ ಉಪ ಕೇಂದ್ರದ ಕಾಮಗಾರಿಗಳನ್ನು ನಿಗತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಕಡೆಚೂರ ಹಾಗೂ ಮುಂಡರಗಿ ಸೇರಿದಂತೆ ವಿವಿಧ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಉದ್ದಿಮೆ ಸ್ಥಾಪನೆಗೆ ನಿವೇಶನ ಪಡೆದಿದ್ದು, ಕೆಲ ಕೈಗಾರಿಕೋದ್ಯಮಿಗಳು ಉದ್ದಿಮೆ ಸ್ಥಾಪನೆ ಮಾಡದಿರುವುದರಿಂದ ಹಂಚಿಕೆ ಮಾಡಲಾದ ನಿವೇಶನವನ್ನು ನಿಯಮಾನುಸಾರ ರದ್ದತಿಗೆ ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು.
ನಿವೇಶನ ಪಡೆದ ಕೈಗಾರಿಕೋದ್ಯಮಿಗಳು ಘಟಕ ಸ್ಥಾಪಿಸಿ ಉದ್ಯೋಗ ನೀಡುವಂತಾಗಬೇಕು. ಆದರೆ ಕೆಲವು ನಿವೇಶನಗಳು ಇಲ್ಲಿ ಖಾಲಿ ಉಳಿದಿದ್ದು ನಮ್ಮ ಗಮನಕ್ಕೆ ಬಂದಿದ್ದು ತೀವ್ರ ಬೇಸರದ ಸಂಗತಿಯಾಗಿದ್ದು, ಇಂತಹ ನಿವೇಶನಗಳು ರದ್ದುಗೊಳಿಸಿ ಅರ್ಹರಿಗೆ ಮರು ಹಂಚಿಕೆ ಮಾಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದಿನ ದಿನಮಾನದಲ್ಲಿ ಕೈಗಾರಿಕೆ ನಡೆಸುವುದು ತುಂಬಾ ಕಷ್ಟದ ಕೆಲಸವಾಗಿದೆ. ಹೀಗಾಗಿ ಕೈಗಾರಿಕೆ ಸ್ಥಾಪಿಸಿ ನಿರುದ್ಯೋಗಿಗಳಿಗೆ ಕೆಲಸ ನೀಡಲು ಮುಂದೆ ಬರುವ ಉದ್ಯಮಿಗಳಿಗೆ ಅನಗತ್ಯ ತೊಂದರೆ ನೀಡದೆ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ಅಗತ್ಯವಿದೆ. ಹೀಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಕೆ.ಐ.ಎ.ಡಿ.ಬಿ., ಕೆ.ಎಸ್.ಎಸ್.ಐ.ಡಿ.ಸಿ. ಅಧಿಕಾರಿಗಳು ಪರಸ್ಪರ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಉದ್ಯಮಿದಾರರಿಗೆ ಸೂಕ್ತ ಸಹಕಾರ ನೀಡಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರಾದ ಮಾಣಿಕ ವಿ.ರಘೋಜಿ, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಪರಿಸರ ಮಾಲಿನ್ಯ ಇಲಾಖೆಯ ಪ್ರಾದೇಶಿಕ ಅಧಿಕಾರಿಯಾದ ವೆಂಕಟೇಶ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಅಧಿಕಾರಿಯಾದ ಪ್ರಕಾಶ, ಕೈಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿಯಾದ ರೇಖಾ ಮ್ಯಾಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.
The post ಕೈಗಾರಿಕಾ ನಿವೇಶನ ಹಂಚಿಕೆ ಅರ್ಜಿಗಳ ಅನುಮೋದನೆ ಪಡೆದುಕೊಳ್ಳವಂತೆ ಸೂಚನೆ:ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. appeared first on Hai Sandur kannada fortnightly news paper.
]]>